25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಜನಸ್ಪಂದನ ಸಭೆ

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ ಗ್ರಾಮ ಪಂಚಾಯತ್ ಗೆ ಸ್ಥಳ ಕಾಯ್ದಿರಿಸಲಾಗಿತ್ತು ಆದರೆ ಇದೀಗ ಅರಣ್ಯ ಇಲಾಖೆ ಹಾಗೂ ಖಾಸಗಿ ವ್ಯಕ್ತಿಯೊಬ್ಬರು ಜಾಗದಲ್ಲಿ ತಕಾರಾರು ನಡೆಸುತ್ತಿದ್ದಾರೆ. 15 ಸೆಂಟ್ಸ್ ಜಾಗವನ್ನು ಸಶ್ಮಾನ ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ ನಮಗೆ ಸ್ಮಶಾನದ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ಹೇಳಿದರು.

ಅರಣ್ಯ ಇಲಾಖೆ ಯಾವುದೇ ತಕಾರಾರು ಇಲ್ಲ. ಶಿಘ್ರವೇ ಸರ್ವೇಯರ್, ಅಧಿಕಾರಿಗಳು, ಪೋಲಿಸ್ ಭದ್ರತೆಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಗಡಿ ಗುರುತು ಮಾಡಿ ಮಹಜರು ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸರ್ವೇ ನಂಬರ್ 184 ರಲ್ಲಿ 80 ಮನೆಗಳಿದ್ದು ಅಲ್ಲಿಯ ಭೂಮಿ ವಾರಿಸುದಾರರಿಗೆ ಪಹಣಿಯಾಗಿದೆ ಆದರೆ ಅರಣ್ಯ ಇಲಾಖೆ ಒತ್ತುವರಿ ನಡೆಸಿದ ಜಾಗಗಳನ್ನು ತೆರವುಗೊಳಿಸುತ್ತಿದೆ ಇದರಿಂದ ಜನಸಾಮಾನ್ಯರು ಗೊಂದಲದಲ್ಲಿ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಅತಿಕ್ರಮಣಗೊಂಡ ಸ್ಥಳವನ್ನು ಪರಿಶೀಲನೆ ನಡೆಸಿ ತೆರವುಗೊಳಿಸವುದಾಗಿ ಅಧಿಕಾರಿಗಳು ತಿಳಿಸಿದರು.

ಜೆಜೆಎಂ ಕಾಮಗಾರಿ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಪ್ರಾರಂಭವಾಗಿಲ್ಲ, ಪೈಪು ಲೈನ್, ನಳ್ಳಿ ಹಾಕಿಲ್ಲ, ಅಪೂರ್ಣವಾಗಿ ಜೆಜೆಎಂ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಸಮರ್ಪಕವಾಗಿ ನಡೆಯದೇ ಪಂಚಾಯತ್ ಹಸ್ತಾಂತರ ತೆಗೆದುಕೊಳ್ಳಬಾರದು ಎಂದು ಶಾಸಕರು ಸೂಚನೆ ನೀಡಿದರು.
ಕಾಡಾನೆ ಹಾವಳಿಗೆ ನೀರಲದಲ್ಲಿ ಸೋಲಾರ್ ಬೇಲಿ ಅಳವಡಿಸಬೇಕು.17 ಕಿ.ಮಿ. ಉದ್ದದ ಸೋಲಾರ್ ಬೇಲಿ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗ್ರಾಮದ ಕೆಲ ಮಂದಿಯ ಕಡತಗಳು ಕಳೆದುಹೋಗಿದೆ ಕಂದಾಯ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ, ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು.

ಲೋವಲ್ಟೇಜ್ ಸಮಸ್ಯೆ, ನೆಟ್ವರ್ಕ್ ರಸ್ತೆ ದುರಸ್ತಿ ಬಗ್ಗೆ ಸಾರ್ವಜನಿಕರು ಹೇಳಿದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕಂದಾಯ ನಿರೀಕ್ಷಕ ಪಾವಡಪ್ಪ, ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya
error: Content is protected !!