ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ ನಿರ್ಮಾಣಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿದ ಎಪ್ಪತೈೇದು ಸಾವಿರದ ಚೆಕ್ ನ್ನು ಶಾಲಾ ಮುಖ್ಯ ಗುರುಗಳಾದ ಶಾಂತಾ ಹೆಚ್.ಅವರಿಗೆ ಬೆಳ್ತಂಗಡಿ ವಲಯದ ಮೇಲ್ವಿಚಾರಕ ರವಿ ವಿತರಣೆ ಮಾಡಿದರು.
ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಯೋಗೀಶ್ ಬಟ್ಟೆಮಾರು, ಕಳಿಯ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಕೆ., ಉಪಾಧ್ಯಕ್ಷ ಪುಷ್ಪ, ಪ್ರತಿನಿಧಿ ಸೌಮ್ಯ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಮತ್ತಿತರರು ಉಪಸ್ಥಿತರಿದ್ದರು.











