22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ನಡ: 100ರ ವರ್ಷಾಚರಣೆ ಸಂಭ್ರಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ರಚನೆಗೊಂಡಿದೆ.

ಈ ಶಾಲೆಯನ್ನು 1925ನೇ ಇಸವಿಯಲ್ಲಿ ನಡ ಪೆರ್ಮಾಣು ಬಸದಿಯಲ್ಲಿ ನಡ ಗುತ್ತು ಚಂದಯ್ಯ ಅಜ್ರಿಯವರು ಆರಂಭಿಸಿದ್ದರು.. ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷರಾಗಿ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿಯಾಗಿ ಸಯ್ಯದ್ ಹಬೀಬ್ ಸಾಹೇಬ್ ಆಯ್ಕೆಯಾಗಿದ್ದಾರೆ.

ಸಮಿತಿಯ ಗೌರವಧ್ಯಕ್ಷರುಗಳಾಗಿ ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮ ಅಧ್ಯಕ್ಷ ಕೆ. ಹರೀಶ್ ಕುಮಾರ್, ಶಾಲಾ ಸಂಸ್ಥಾಪಕ ಮನೆತನದ ಧನಂಜಯ ಅಜ್ರಿ ನಡಗುತ್ತು, ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇವರು ಮಾರ್ಗದರ್ಶನ ನೀಡಲಿದ್ದಾರೆ. ಪ್ರಧಾನ ಸಂಚಾಲಕರಾಗಿ ಡಾ. ಸತೀಶ್ಚಂದ್ರ ಸೂರ್ಯಗುತ್ತು, ಉಪಾಧ್ಯಕ್ಷರುಗಳಾಗಿ ಅಜಿತ್ ಕುಮಾರ್ ಆರಿಗ, ಜಯ ಶೆಟ್ಟಿ, ಶ್ಯಾಮಸುಂದರ್, ಅಪ್ಪು, ಸ್ಟೇನಿ ಪಿಂಟೋ, ಶ್ರೀಮತಿ ಗ್ರೇಸಿ ವೇಗಸ್ ಹರೀಶ್ಚಂದ್ರ ಗೌಡ, ವಸಂತ್ ಗೌಡ, ಸಲಹೆಗಾರರಾಗಿ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಮಾಜಿ ಜಿ.ಪಂ. ಸದಸ್ಯ ಬಿ. ರಾಜಶೇಖರ ಅಜ್ರಿ, ಹಳೆ ವಿದ್ಯಾರ್ಥಿ ಸಂಫದ ಅಧ್ಯಕ್ಷ ಧರಣೇಂದ್ರ ಕುಮಾರ್, ಎಸ್. ಡಿ. ಎಂ. ಸಿ. ಅಧ್ಯಕ್ಷ ಜನಾರ್ಧನ್ ನಾಯ್ಕ್, ಡಾ. ಪ್ರದೀಪ್ ನಾವೂರು ಲಯನ್ ಮುರಳಿ ಬಲಿಪ, ಕಾರ್ಯದರ್ಶಿಗಳಾಗಿ ವಸಂತ್ ಗೌಡ ವಿಜಿ ಕೂಲ್, ಜಾಕಿರ್ ಹುಸೇನ್, ಶ್ರೀಮತಿ ಸಂಧ್ಯಾ ಜೈನ್, ಸಂಘಟನಾ ಕಾರ್ಯದರ್ಶಿಗಳಾಗಿ ವಿಜಯ ಗೌಡ, ಜಯಂತ ಗೌಡ ಕೊಯಗುಡ್ಡೆ, ಜತೆ ಕೋಶಾಧಿಕಾರಿಯಾಗಿ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ, ಜತೆ ಕಾರ್ಯದರ್ಶಿಗಳಾಗಿ ವಿಕ್ಟರ್ ಮಾಡ್ತಾ, ಶ್ರೀಮತಿ ಸುಜಾತಾ ಎಸ್., ಆಯ್ಕೆಗೊಂಡರು. ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನಾಗಿ ಸುಮಾರು 60 ವಿದ್ಯಾಭಿಮಾನಿಗಳನ್ನು ಆಯ್ಕೆ ಮಾಡಲಾಯಿತು.

ಶತಮಾನೋತ್ಸವ ಸಮಿತಿ ವತಿಯಿಂದ ಶಾಲೆಗೆ ಸುಸಜ್ಜಿತ ರಂಗ ಮಂದಿರ, ಇಂಟರ್ ಲಾಕ್, ಆವರಣ ಗೋಡೆ, ದ್ವಾರ ಇತ್ಯಾದಿ ಶಾಶ್ವತ ಕಾಮಗಾರಿಗಳನ್ನು ಮಾಡುವುದೆಂದು ನಿರ್ಧರಿಸಲಾಗಿದೆ.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya
error: Content is protected !!