August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಜನಸ್ಪಂದನ ಸಭೆ

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ ಗ್ರಾಮ ಪಂಚಾಯತ್ ಗೆ ಸ್ಥಳ ಕಾಯ್ದಿರಿಸಲಾಗಿತ್ತು ಆದರೆ ಇದೀಗ ಅರಣ್ಯ ಇಲಾಖೆ ಹಾಗೂ ಖಾಸಗಿ ವ್ಯಕ್ತಿಯೊಬ್ಬರು ಜಾಗದಲ್ಲಿ ತಕಾರಾರು ನಡೆಸುತ್ತಿದ್ದಾರೆ. 15 ಸೆಂಟ್ಸ್ ಜಾಗವನ್ನು ಸಶ್ಮಾನ ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ ನಮಗೆ ಸ್ಮಶಾನದ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ಹೇಳಿದರು.

ಅರಣ್ಯ ಇಲಾಖೆ ಯಾವುದೇ ತಕಾರಾರು ಇಲ್ಲ. ಶಿಘ್ರವೇ ಸರ್ವೇಯರ್, ಅಧಿಕಾರಿಗಳು, ಪೋಲಿಸ್ ಭದ್ರತೆಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಗಡಿ ಗುರುತು ಮಾಡಿ ಮಹಜರು ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸರ್ವೇ ನಂಬರ್ 184 ರಲ್ಲಿ 80 ಮನೆಗಳಿದ್ದು ಅಲ್ಲಿಯ ಭೂಮಿ ವಾರಿಸುದಾರರಿಗೆ ಪಹಣಿಯಾಗಿದೆ ಆದರೆ ಅರಣ್ಯ ಇಲಾಖೆ ಒತ್ತುವರಿ ನಡೆಸಿದ ಜಾಗಗಳನ್ನು ತೆರವುಗೊಳಿಸುತ್ತಿದೆ ಇದರಿಂದ ಜನಸಾಮಾನ್ಯರು ಗೊಂದಲದಲ್ಲಿ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಅತಿಕ್ರಮಣಗೊಂಡ ಸ್ಥಳವನ್ನು ಪರಿಶೀಲನೆ ನಡೆಸಿ ತೆರವುಗೊಳಿಸವುದಾಗಿ ಅಧಿಕಾರಿಗಳು ತಿಳಿಸಿದರು.

ಜೆಜೆಎಂ ಕಾಮಗಾರಿ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಪ್ರಾರಂಭವಾಗಿಲ್ಲ, ಪೈಪು ಲೈನ್, ನಳ್ಳಿ ಹಾಕಿಲ್ಲ, ಅಪೂರ್ಣವಾಗಿ ಜೆಜೆಎಂ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಸಮರ್ಪಕವಾಗಿ ನಡೆಯದೇ ಪಂಚಾಯತ್ ಹಸ್ತಾಂತರ ತೆಗೆದುಕೊಳ್ಳಬಾರದು ಎಂದು ಶಾಸಕರು ಸೂಚನೆ ನೀಡಿದರು.
ಕಾಡಾನೆ ಹಾವಳಿಗೆ ನೀರಲದಲ್ಲಿ ಸೋಲಾರ್ ಬೇಲಿ ಅಳವಡಿಸಬೇಕು.17 ಕಿ.ಮಿ. ಉದ್ದದ ಸೋಲಾರ್ ಬೇಲಿ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗ್ರಾಮದ ಕೆಲ ಮಂದಿಯ ಕಡತಗಳು ಕಳೆದುಹೋಗಿದೆ ಕಂದಾಯ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ, ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು.

ಲೋವಲ್ಟೇಜ್ ಸಮಸ್ಯೆ, ನೆಟ್ವರ್ಕ್ ರಸ್ತೆ ದುರಸ್ತಿ ಬಗ್ಗೆ ಸಾರ್ವಜನಿಕರು ಹೇಳಿದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕಂದಾಯ ನಿರೀಕ್ಷಕ ಪಾವಡಪ್ಪ, ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya
error: Content is protected !!