37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಪೊಲೀಸ್ವರದಿ

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52ವ)ಮೃತಪಟ್ಟವರು.

ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾ ಅವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಕೃಷಿಕರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya
error: Content is protected !!