September 6, 2026
ಅಪಘಾತಗ್ರಾಮಾಂತರ ಸುದ್ದಿಪೊಲೀಸ್ವರದಿ

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52ವ)ಮೃತಪಟ್ಟವರು.

ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾ ಅವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಕೃಷಿಕರಾಗಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಯುವಕರು ಮಹಿಳೆಯರಿಗೆ ನೇರ ಅವಕಾಶ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya
error: Content is protected !!