August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಜನಸ್ಪಂದನ ಸಭೆ

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ ಗ್ರಾಮ ಪಂಚಾಯತ್ ಗೆ ಸ್ಥಳ ಕಾಯ್ದಿರಿಸಲಾಗಿತ್ತು ಆದರೆ ಇದೀಗ ಅರಣ್ಯ ಇಲಾಖೆ ಹಾಗೂ ಖಾಸಗಿ ವ್ಯಕ್ತಿಯೊಬ್ಬರು ಜಾಗದಲ್ಲಿ ತಕಾರಾರು ನಡೆಸುತ್ತಿದ್ದಾರೆ. 15 ಸೆಂಟ್ಸ್ ಜಾಗವನ್ನು ಸಶ್ಮಾನ ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ ನಮಗೆ ಸ್ಮಶಾನದ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ಹೇಳಿದರು.

ಅರಣ್ಯ ಇಲಾಖೆ ಯಾವುದೇ ತಕಾರಾರು ಇಲ್ಲ. ಶಿಘ್ರವೇ ಸರ್ವೇಯರ್, ಅಧಿಕಾರಿಗಳು, ಪೋಲಿಸ್ ಭದ್ರತೆಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಗಡಿ ಗುರುತು ಮಾಡಿ ಮಹಜರು ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸರ್ವೇ ನಂಬರ್ 184 ರಲ್ಲಿ 80 ಮನೆಗಳಿದ್ದು ಅಲ್ಲಿಯ ಭೂಮಿ ವಾರಿಸುದಾರರಿಗೆ ಪಹಣಿಯಾಗಿದೆ ಆದರೆ ಅರಣ್ಯ ಇಲಾಖೆ ಒತ್ತುವರಿ ನಡೆಸಿದ ಜಾಗಗಳನ್ನು ತೆರವುಗೊಳಿಸುತ್ತಿದೆ ಇದರಿಂದ ಜನಸಾಮಾನ್ಯರು ಗೊಂದಲದಲ್ಲಿ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಅತಿಕ್ರಮಣಗೊಂಡ ಸ್ಥಳವನ್ನು ಪರಿಶೀಲನೆ ನಡೆಸಿ ತೆರವುಗೊಳಿಸವುದಾಗಿ ಅಧಿಕಾರಿಗಳು ತಿಳಿಸಿದರು.

ಜೆಜೆಎಂ ಕಾಮಗಾರಿ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಪ್ರಾರಂಭವಾಗಿಲ್ಲ, ಪೈಪು ಲೈನ್, ನಳ್ಳಿ ಹಾಕಿಲ್ಲ, ಅಪೂರ್ಣವಾಗಿ ಜೆಜೆಎಂ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಸಮರ್ಪಕವಾಗಿ ನಡೆಯದೇ ಪಂಚಾಯತ್ ಹಸ್ತಾಂತರ ತೆಗೆದುಕೊಳ್ಳಬಾರದು ಎಂದು ಶಾಸಕರು ಸೂಚನೆ ನೀಡಿದರು.
ಕಾಡಾನೆ ಹಾವಳಿಗೆ ನೀರಲದಲ್ಲಿ ಸೋಲಾರ್ ಬೇಲಿ ಅಳವಡಿಸಬೇಕು.17 ಕಿ.ಮಿ. ಉದ್ದದ ಸೋಲಾರ್ ಬೇಲಿ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗ್ರಾಮದ ಕೆಲ ಮಂದಿಯ ಕಡತಗಳು ಕಳೆದುಹೋಗಿದೆ ಕಂದಾಯ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ, ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು.

ಲೋವಲ್ಟೇಜ್ ಸಮಸ್ಯೆ, ನೆಟ್ವರ್ಕ್ ರಸ್ತೆ ದುರಸ್ತಿ ಬಗ್ಗೆ ಸಾರ್ವಜನಿಕರು ಹೇಳಿದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕಂದಾಯ ನಿರೀಕ್ಷಕ ಪಾವಡಪ್ಪ, ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!