30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಜನಸ್ಪಂದನ ಸಭೆ

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ ಗ್ರಾಮ ಪಂಚಾಯತ್ ಗೆ ಸ್ಥಳ ಕಾಯ್ದಿರಿಸಲಾಗಿತ್ತು ಆದರೆ ಇದೀಗ ಅರಣ್ಯ ಇಲಾಖೆ ಹಾಗೂ ಖಾಸಗಿ ವ್ಯಕ್ತಿಯೊಬ್ಬರು ಜಾಗದಲ್ಲಿ ತಕಾರಾರು ನಡೆಸುತ್ತಿದ್ದಾರೆ. 15 ಸೆಂಟ್ಸ್ ಜಾಗವನ್ನು ಸಶ್ಮಾನ ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ ನಮಗೆ ಸ್ಮಶಾನದ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ಹೇಳಿದರು.

ಅರಣ್ಯ ಇಲಾಖೆ ಯಾವುದೇ ತಕಾರಾರು ಇಲ್ಲ. ಶಿಘ್ರವೇ ಸರ್ವೇಯರ್, ಅಧಿಕಾರಿಗಳು, ಪೋಲಿಸ್ ಭದ್ರತೆಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಗಡಿ ಗುರುತು ಮಾಡಿ ಮಹಜರು ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸರ್ವೇ ನಂಬರ್ 184 ರಲ್ಲಿ 80 ಮನೆಗಳಿದ್ದು ಅಲ್ಲಿಯ ಭೂಮಿ ವಾರಿಸುದಾರರಿಗೆ ಪಹಣಿಯಾಗಿದೆ ಆದರೆ ಅರಣ್ಯ ಇಲಾಖೆ ಒತ್ತುವರಿ ನಡೆಸಿದ ಜಾಗಗಳನ್ನು ತೆರವುಗೊಳಿಸುತ್ತಿದೆ ಇದರಿಂದ ಜನಸಾಮಾನ್ಯರು ಗೊಂದಲದಲ್ಲಿ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಅತಿಕ್ರಮಣಗೊಂಡ ಸ್ಥಳವನ್ನು ಪರಿಶೀಲನೆ ನಡೆಸಿ ತೆರವುಗೊಳಿಸವುದಾಗಿ ಅಧಿಕಾರಿಗಳು ತಿಳಿಸಿದರು.

ಜೆಜೆಎಂ ಕಾಮಗಾರಿ ಗ್ರಾಮ ವ್ಯಾಪ್ತಿಯಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಪ್ರಾರಂಭವಾಗಿಲ್ಲ, ಪೈಪು ಲೈನ್, ನಳ್ಳಿ ಹಾಕಿಲ್ಲ, ಅಪೂರ್ಣವಾಗಿ ಜೆಜೆಎಂ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಸಮರ್ಪಕವಾಗಿ ನಡೆಯದೇ ಪಂಚಾಯತ್ ಹಸ್ತಾಂತರ ತೆಗೆದುಕೊಳ್ಳಬಾರದು ಎಂದು ಶಾಸಕರು ಸೂಚನೆ ನೀಡಿದರು.
ಕಾಡಾನೆ ಹಾವಳಿಗೆ ನೀರಲದಲ್ಲಿ ಸೋಲಾರ್ ಬೇಲಿ ಅಳವಡಿಸಬೇಕು.17 ಕಿ.ಮಿ. ಉದ್ದದ ಸೋಲಾರ್ ಬೇಲಿ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗ್ರಾಮದ ಕೆಲ ಮಂದಿಯ ಕಡತಗಳು ಕಳೆದುಹೋಗಿದೆ ಕಂದಾಯ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ, ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು.

ಲೋವಲ್ಟೇಜ್ ಸಮಸ್ಯೆ, ನೆಟ್ವರ್ಕ್ ರಸ್ತೆ ದುರಸ್ತಿ ಬಗ್ಗೆ ಸಾರ್ವಜನಿಕರು ಹೇಳಿದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕಂದಾಯ ನಿರೀಕ್ಷಕ ಪಾವಡಪ್ಪ, ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya
error: Content is protected !!