ಹೊಸಂಗಡಿ: ಹೊಸಂಗಡಿ ಬಳಿ ಇಂದು(ಡಿ.31)ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.
ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು ಇಂದು ಮಧ್ಯಾಹ್ನ ಅಂಗಡಿಗೆಂದು ನಡೆದುಕೊಂಡು ಹೋಗುತ್ತಿದ್ದನೆನ್ನಲಾಗಿದೆ.
ಈ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಝಾಹಿರ್ ಮೃತಪಟ್ಟಿದ್ದಾನೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.











