26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಸ್ಥಾಪಕ ಪ್ರಾಚಾರ್ಯರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಪ್ರೊ. ಎಸ್. ಪ್ರಭಾಕರ್ ಅವರಿಗೆ ನುಡಿ ನಮನ ಕಾರ್ಯಕ್ರಮ
ಜ.1ರಂದು ಶ್ರೀ ಸಿದ್ಧವನ ಗುರುಕುಲ ಉಜಿರೆಯಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಸರ್ಕಾರಿ ಉದ್ಯೋಗದಲ್ಲಿ ಇದ್ದ ಪ್ರಭಾಕರ್ ಅವರು ಉಜಿರೆ ಕಾಲೇಜು ಆರಂಭಿಸುವಾಗ ಸ್ಥಾಪಕ ಪ್ರಾಚಾರ್ಯರಾಗಿ ಕಾಲೇಜಿನ ಬೆಳವಣಿಗೆಗೆ ಶ್ರಮಿಸಿದ್ದರು. ವಜ್ರ ಕುಮಾರ್ ಮತ್ತು ಪ್ರೊ. ಪ್ರಭಾಕರ್ ನನ್ನ ಎರಡು ಕಣ್ಣುಗಳು ಇದ್ದಂತೆ. ಯಾವುದೇ ಯೋಜನೆ ಆರಂಭಿಸಿದರೂ ಅದನ್ನು ಬೇಡ ಎಂದವರಲ್ಲ ಎಂದರು. ಧಮ೯ಸ್ಥಳ ಲಕ್ಷದೀಪೋತ್ಸವ ಕಾಯ೯ಕ್ರಮದಲ್ಲಿ 2022ರವರೆಗೆ ಕಾಯ೯ದಶಿ೯ಯಾಗಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದರು. ಅವರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ಇತ್ತು. ಅವರು ಅತ್ಯಂತ ಶಿಸ್ತಿನ ವ್ಯಕ್ತಿ, ಆಹಾರದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದಿದ್ದರು ಎಂದರು.


ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಸತೀಶ್ಚಂದ್ರ ಸುಯ೯ಗುತ್ತು, ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಸುಪ್ರೀಯ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್ ಅವರು ಪ್ರೊ. ಪ್ರಭಾಕರ್ ಅವರಿಗೆ ನುಡಿನಮನ ಸಲ್ಲಿಸಿದರು. ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ದಿವಾ ಕೊಕ್ಕಡ ಕಾಯ೯ಕ್ರಮ ನಿರೂಪಿಸಿದರು.

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya
error: Content is protected !!