24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು ಕಳೆದ ಮಂಗಳವಾರ ನಡೆದಿತ್ತು.

ತಾಯಿಯ ಉತ್ತರಕ್ರಿಯೆ ಮರುದಿನ ಅವರ ಮಗ ಮಹಾಬಲ ಎಂಬವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಾಬಲ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ತಮ್ಮ ತಾಯಿ ಮರಣದ 18ನೇ ದಿನಕ್ಕೆ ನಿಧನರಾಗಿದ್ದು ಇವರ ಕುಟುಂಬಕ್ಕೆ ಒಂದರ ಬೆನ್ನಲ್ಲೇ ಇನ್ನೊಂದು ಆಘಾತ ಬಂದಂತಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಸಹೋದರ ಇಬ್ಬರು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya
error: Content is protected !!