25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!