24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

ಬೆಳ್ತಂಗಡಿ : ಕಣಿಯೂರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳ್ಳರಮಜಲು ಎಂಬಲ್ಲಿ ರಸ್ತೆ ಕುಸಿದು‌ ಕೆಲವು ಸಮಯಗಳೇ ಆಯಿತು. ಈ ಬಗ್ಗೆ ಗ್ರಾಮಸಭೆಯಲ್ಲಿ ಹೇಳಿದ್ರೂ ಗ್ರಾಮಪಂಚಾಯತ್ ನಲ್ಲಿ‌ ವಿನಂತಿಸಿಕೊಂಡರೂ ಇದುವರೆಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಇನ್ನು ರಸ್ತೆಯನ್ನು ಆ ಕಲ್ಕುಡನೇ ಸರಿ ಮಾಡಬೇಕಷ್ಟೆ ಎಂದು ಆಕ್ರೋಶಗೊಂಡ ಗ್ರಾಮಸ್ಥರೊಬ್ಬರು ಹೇಳಿದರು.

ಶಾಸಕರ ಅಧ್ಯಕ್ಷತೆಯಲ್ಲಿ ಪದ್ಮುಂಜದಲ್ಲಿ ಡಿ.31ರಂದು ನಡೆದ ಕಣಿಯೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದರು.

ಪದ್ಮುಂಜ-ಕಣಿಯೂರು ರಸ್ತೆಯ ಬೊಳ್ಳರಮಜಲು ಎಂಬಲ್ಲಿ ರಸ್ತೆ ಕಾಂಕ್ರೀಟ್ ರಸ್ತೆ ಕುಸಿದು ಅಪಾಯಕಾರಿಯಾಗಿದೆ, ತಡೆಗೋಡೆ ಮಾಡಿಸುವಂತೆ ಕೆಲವು ಸಮಯಗಳಿಂದ ಹೇಳಿ‌ ಕೇಳಿ ಸಾಕಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಭೆಯಲ್ಲಿ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸಂಬಂಧಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಸೀತಾರಾಮ ಮಡಿವಾಳ ಬೊಳ್ಳರಮಜಲು ಪ್ರದೇಶದದ ಮೂರು ವರ್ಷಗಳಿಂದ ಟಿ.ಸಿ. ಸಮಸ್ಯೆ ಇದೆ ಇಲಾಖಾ ಜೆಇ ಅಥವಾ ಕೆಳಗಿನ ಅಧಿಕಾರಿಗಳು ಲೆಕ್ಕಕ್ಕಿದ್ದಾರೆ.
ಗ್ರಾಮಪಂಚಾಯತ್ ಅಧ್ಯಕ್ಷನಾಗಿ ಜೆ.ಇ. ವಾರಗಟ್ಟಲೆ ಕಾಲ್ ಮಾಡಿದ್ರೂ ಅವರು ರಿಸೀವ್ ಮಾಡುತ್ತಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆಯಾ ಇಲಾಖಾಧಿಕಾರಿಗಳು ತಮ್ನ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆ, ಕುಂದುಕೊರತೆಗಳ ಬಗ್ಗೆ ಉತ್ತರಿಸಿದರು.
ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದ ಬಗ್ಗೆ ಅದೇ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿಯಾಗಿರುವ
ನಿವೃತ್ತ ಸೈನಿಕನ ಆಕ್ಷೇಪ ಕಿರುಕುಳ ನೀಡುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ಬಗ್ಗೆ ಶಾಲೆಯ ಜಾಗವನ್ನು‌ ಯಾವ ಕಾರಣಕ್ಕೂ ಯಾರಿಗೂ ಮಂಜೂರಾತಿ ಮಾಡುವುದಿಲ್ಲ, ಯಾರೂ ಆತಂಕಪಡುವ ಅಗತ್ಯ ಇಲ್ಲ ; ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ತಿಳಿಸಿದರು.
ತಾ.ಪಂ. ಇಒ. ಭವಾನಿಶಂಕರ್, ಗ್ರಾ.ಪಂ. ಪಿಡಿಒ. ಗೀತ, ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಗ್ರಾ.ಪಂ. ಉಪಸ್ಥಿತರಿದ್ದರು.

Related posts

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya
error: Content is protected !!