28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು ಕಳೆದ ಮಂಗಳವಾರ ನಡೆದಿತ್ತು.

ತಾಯಿಯ ಉತ್ತರಕ್ರಿಯೆ ಮರುದಿನ ಅವರ ಮಗ ಮಹಾಬಲ ಎಂಬವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಾಬಲ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ತಮ್ಮ ತಾಯಿ ಮರಣದ 18ನೇ ದಿನಕ್ಕೆ ನಿಧನರಾಗಿದ್ದು ಇವರ ಕುಟುಂಬಕ್ಕೆ ಒಂದರ ಬೆನ್ನಲ್ಲೇ ಇನ್ನೊಂದು ಆಘಾತ ಬಂದಂತಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಸಹೋದರ ಇಬ್ಬರು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!