28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು ಕಳೆದ ಮಂಗಳವಾರ ನಡೆದಿತ್ತು.

ತಾಯಿಯ ಉತ್ತರಕ್ರಿಯೆ ಮರುದಿನ ಅವರ ಮಗ ಮಹಾಬಲ ಎಂಬವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಾಬಲ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ತಮ್ಮ ತಾಯಿ ಮರಣದ 18ನೇ ದಿನಕ್ಕೆ ನಿಧನರಾಗಿದ್ದು ಇವರ ಕುಟುಂಬಕ್ಕೆ ಒಂದರ ಬೆನ್ನಲ್ಲೇ ಇನ್ನೊಂದು ಆಘಾತ ಬಂದಂತಾಗಿದೆ.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಸಹೋದರ ಇಬ್ಬರು ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya
error: Content is protected !!