28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಆಯೋಜಿಸಲಾಗುತ್ತಿರುವ 53ನೇ ವರ್ಷದ ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 31ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯವರು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮ ಕ್ಕೆ ಬರುವಂತೆ ಆಹ್ವಾನಿಸಿದರು. ಈ ಧಾರ್ಮಿಕ ಮಹೋತ್ಸವವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಜ. 13ರಿಂದ 14 ಬುಧವಾರದವರೆಗೆ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಜರುಗಲಿದೆ.

53 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಭಜನಾ ಮಂಡಳಿ, ಗ್ರಾಮೀಣ ಭಾಗದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿಕೊಂಡಿದ್ದು, ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಭಕ್ತಾದಿಗಳಲ್ಲಿ ಅಪಾರ ಭಕ್ತಿ ಹಾಗೂ ಶ್ರದ್ದೆಗೆ ಪಾತ್ರವಾಗಿರುವುದು ಗಮನಾರ್ಹವಾಗಿದೆ. ಕಾರ್ಯಕ್ರಮದ ಅವಧಿಯಲ್ಲಿ ನಿರಂತರ ಅರ್ಧ ಏಕಾಹ ಭಜನೆ, ವಿಶೇಷ ಪೂಜೆಗಳು, ಧಾರ್ಮಿಕ ವಿಧಿವಿಧಾನಗಳು ಹಾಗೂ ಭಕ್ತಾದಿಗಳ ಸಹಭಾಗಿತ್ವದೊಂದಿಗೆ ವಿವಿಧ ಭಜನಾ ಸೇವೆಗಳು ನಡೆಯಲಿದ್ದು, ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಎಂದು ಆಯೋಜಕರು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಶೀಂಬುಲೂ, ಜಯಕಿರ್ತಿ ಜೈನ್, ಜಿತೇಂದ್ರ ಜೈನ್, ಸಂತೋಷ್ ಜೈನ್, ನಾಗೇಶ್ ಬಿ ನೆರಿಯ, ಶ್ರೀಧರ್ ರಾವ್ ಕಾಯಡ, ಟಾಕಪ್ಪ ಗೌಡ, ಸುರೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಅಕ್ಷತ್ ರೈ, ಗುರುವಪ್ಪ ನಾಯ್, ಹಾಗೂ ಭಜನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya
error: Content is protected !!