May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಇದರ ಆಶ್ರಯದಲ್ಲಿ ಜ್ಞಾನದೀಪ ಶಾಲಾ ಕಾಯ೯ಕ್ರಮದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ 418 ಶಾಲೆಗಳಿಗೆ 3472 ಜೊತೆ ಪೀಠೋಪಕರಣ ವಿತರಣೆ ಕಾಯ೯ಕ್ರಮ ಜ.1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಯ೯ನಿವಾ೯ಹಣಾಧಿಕಾರಿ ಅನಿಲ್ ಕುಮಾರ್, ವೀರೂ ಶೆಟ್ಟಿ, ಉದ್ಯಮಿ ಮೋಹನ್ ಕುಮಾರ್ ಉಜಿರೆ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮೀಣ ಶಾಲೆಗಳಿಗೆ ಪೀಠೋಪಕರಣಗಳ ಕೊಡುಗೆ : ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಪೀಠೋಪಕರಣಗಳ ಕೊರತೆಯಿರುವ ಸರಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚ್‌ಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಫೈಬರ್ ಮಾದರಿಯ ಡೆಸ್ಕ್ ಬೆಂಚ್‌ಗಳನ್ನು ಪೂರೈಕೆ ಮಾಡುತ್ತಿದ್ದು, ಅಧಿಕ ಬಾಳಿಕೆ ಹಾಗೂ ಕಡಿಮೆ ಭಾರವನ್ನು ಹೊಂದಿರುತ್ತದೆ. ಅನೇಕ ಗ್ರಾಮೀಣ ಶಾಲೆಗಳಲ್ಲಿ ಡೆಸ್ಕ್ ಬೆಂಚುಗಳ ಕೊರತೆಯನ್ನು ಗಮನಿಸಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಈ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಇದರಂತೆ ಶಾಲೆಗಳಿಗೆ ಗರಿಷ್ಟ 10 ಜೊತೆ ಡೆಸ್ಕ್ ಬೆಂಚುಗಳನ್ನು ಒದಗಿಸಲಾಗುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದಲೇ ಶಾಲೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಶೇ. 20ರಷ್ಟು ಮೊತ್ತವನ್ನು ಶಾಲಾಭಿವೃದ್ಧಿ ಸಮಿತಿಗಳು ಭರಿಸಿದರೆ ಉಳಿದ ಶೇ. 80 ರಷ್ಟು ಮೊತ್ತವನ್ನು ಕ್ಷೇತ್ರದಿಂದ ಭರಿಸಲಾಗುತ್ತಿದೆ. ಇದರಂತೆ ಇದುವರೆಗೆ ಒಟ್ಟು ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಲಾಗಿದೆ. ಇದಕ್ಕಾಗಿ ರೂ. 28.55 ಕೋಟಿ ಅನುದಾನ ವಿನಿಯೋಗಿಸಲಾಗಿದೆ.

ಪ್ರಸ್ತುತ ವರ್ಷ ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ ವಿವಿಧ ತಾಲೂಕುಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್ಗಳನ್ನು ವಿತರಣೆ ಮಾಡಲಾಗುತ್ತಿದೆ.
2025-26ನೇ ಸಾಲಿನಲ್ಲಿ ವಿತರಿಸಲಾಗುವ ಡೆಸ್ಕ್-ಬೆಂಚ್‌ಗಳ ವಿವರ:
ಬೆಂಗಳೂರು ಗ್ರಾಮಾಂತರ 71 ಶಾಲೆಗಳಿಗೆ 650 ಡೆಸ್ಕ್-ಬೆಂಚುಗಳು, ಚಿಕ್ಕಬಳ್ಳಾಪುರ ಶಾಲೆಗಳಿಗೆ 47 352 ಡೆಸ್ಕ್-ಬೆಂಚುಗಳು,
ತುಮಕೂರು 212 ಶಾಲೆಗಳಿಗೆ 1731 ಡೆಸ್ಕ್-ಬೆಂಚುಗಳು, ಕೋಲಾರ 88 ಶಾಲೆಗಳಿಗೆ 739 ಡೆಸ್ಕ್-ಬೆಂಚುಗಳು,

ಪ್ರಸ್ತುತ ವರ್ಷ 4 ಜಿಲ್ಲೆಯ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳನ್ನು ಪೂರೈಕೆ ಮಾಡಲಾಗುತ್ತಿದ್ದು, ಒಟ್ಟು ರೂ 2.50 ಕೋಟಿ ಮೊತ್ತ ವಿನಿಯೋಗಿಸಲಾಗುತ್ತಿದೆ. ಇದರಿಂದಾಗಿ ಸುಮಾರು 17,360 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಯೋಜನೆಯ ಕಾಯ೯ನಿವ೯ಹಕ ನಿದೇ೯ಶಕರಾದ ಅನಿಲ್ ಕುಮಾರ್ ಈ ಸಂದರ್ಭದ ತಿಳಿಸಿದರು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!