May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!