26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಿಂದ ಸಿಂಗರಿಸಿದ್ದಾರೆ.

ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ, ಕೆಂಪು ಸೇವಂತಿಗೆ, ಗುಲಾಬಿ ಬಟನ್, ರೋಸ್‌ಪೆಟಲ್ಸ್, ಸುಗಂಧರಾಜ ಮೊದಲಾದ ಹೂವುಗಳು ಹಾಗೂ ಸೇಬು, ಮುಸುಂಬಿ ಮತ್ತು ಕಿತ್ತಳೆ ಮೊದಲಾದ ಹಣ್ಣುಗಳು, ವಿವಿಧ ಜಾತಿಯ ಎಲೆಗಳನ್ನು ಬಳಸಿ ಆಕರ್ಷಕ ವಿನ್ಯಾಸದಲ್ಲಿ ಅಲಂಕಾರ ಮಾಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ 150 ಮಂದಿ ಸ್ವಯಂಸೇವಕರಾಗಿ ಅಲಂಕಾರ ಸೇವೆಯನ್ನು ಮಾಡಿ ಧನ್ಯತೆಯನ್ನು ಹೊಂದಿದ್ದಾರೆ.

Related posts

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!