24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, ಜನಸಾಮಾನ್ಯರ ಆರೋಗ್ಯದ ಕಾಳಜಿಯೊಂದಿಗೆ ಹೆಗ್ಗಡೆಯವರು ಪ್ರಾರಂಭಿಸಿದ ಈ ಆಸ್ಪತ್ರೆಯಲ್ಲಿ ಎಲ್ಲಾ ವಿಭಾಗದ ಸಿಬ್ಬಂದಿ ಸಮರ್ಪಣಾ ಭಾವದಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದರಿಂದ ಈ ಆಸ್ಪತ್ರೆ ಜನರ ವಿಶ್ವಾಸಗಳಿಸಲು ಸಾಧ್ಯವಾಯಿತು. ಕೆಲಸ ಮತ್ತು ಸೇವೆಯಲ್ಲಿ ವ್ಯತ್ಯಾಸ ಇದೆ. ಇಲ್ಲಿನ ಸಿಬ್ಬಂದಿ ಸೇವಾಮನೋಭಾವದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ ರೋಗಿಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲು ಸಹಕಾರಿಯಾಗಿದೆ ಎಂದರು.

ರೋಗಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ರೋಗ ಬಾರದಂತೆ ತಡೆಯುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಉಚಿತ ಶಿಬಿರಗಳನ್ನು ಆಯೋಜಿಸಿ ಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ಈ ಆಸ್ಪತ್ರೆಯ ಮುಖಾಂತರ ಎಂಆರ್‌ಐ ಸ್ಕಾö್ಯನಿಂಗ್, ನರ್ಸಿಂಗ್ ಕಾಲೇಜ್ ಮುಂತಾದ ಹಲವಾರು ಯೋಜನೆಗಳನ್ನು ಪೂಜ್ಯರು ಹಾಕಿಕೊಂಡಿದ್ದು, ೨೦೨೬ರಲ್ಲಿ ಈ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿದ್ದು, ಬೆಳ್ತಂಗಡಿ ಮತ್ತು ಆಸುಪಾಸಿನ ತಾಲೂಕಿನ ಜನತೆಗೆ ಇನ್ನೂ ಹೆಚ್ಚಿನ ಅತ್ಯಾಧುನಿಕ ವೈದ್ಯಕೀಯ ಸೇವೆ ಇಲ್ಲಿ ದೊರೆಯಲಿದೆ. ಇಲ್ಲಿಗೆ ಬರುವ ರೋಗಿಗಳು ಶೀಘ್ರ ಗುಣಮುಖರಾಗಿ ಆರೋಗ್ಯವಂತ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್.ಪಿ, ನೇತ್ರ ಚಿಕಿತ್ಸಾ ತಜ್ಞರಾದ ಡಾ| ಸುಭಾಶ್ಚಂದ್ರ, ಮೂಳೆ ಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್.ಪಿ, ಡಾ| ಹರೀಶ್ ಬಿ.ಎಸ್, ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಪೆಥಲಾಜಿಸ್ಟ್ ಡಾ| ಮೇಘಾ ಎಂ ಮತ್ತು ಇತರ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳ ತಂಡ ಹೂವಿನ ಎಸಳುಗಳಿಂದ ರಂಗೋಲಿ ರಚಿಸಿದ್ದರು. ಸ್ಟೋರ್ ಇನ್‌ಚಾರ್ಜ್ ಜಗನ್ನಾಥ ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya
error: Content is protected !!