24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

ನಿಡ್ಲೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ ಇಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನಾ ಸಮಾರಂಭವು ಜ.1ರಂದು ಜರಗಿತು.

ಕಾರ್ಯಕ್ರಮದ ಘನ ಅಧ್ಯಕ್ಷ ಸ್ಥಾನವನ್ನು ರುಕ್ಷ್ಮಯ ಪೂಜಾರಿ ಎಸ್ ಡಿ ಎಂ ಸಿ ಅಧ್ಯಕ್ಷರು ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಗ್ರಿಲೀಫ್ ಇಂಡಸ್ಟ್ರಿಯ ಮಾಲಕ ಅವಿನಾಶ್ ರಾವ್ ಉದ್ಘಾಟಿಸಿ ಎಲ್ ಕೆಜಿ ತರಗತಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪುರಂದರ ಗೌಡ ಗಣೇಶ್ ಸ್ಕೋರ್ ಮಾಲಕರು, ನವೀನ್ ಕುಮಾರ್ ಗಾಂತ್ರಂಡ ಗೌರವ ಅಧ್ಯಕ್ಷರು ನಿಸರ್ಗ ಯುವಜನೇತರ ಮಂಡಲ (ರಿ) ಬರಂಗಾಯ, ಕೃಷ್ಣಕುಮಾ‌ರ್ ಕಾಟ್ಲ ಗೌರವ ಅಧ್ಯಕ್ಷರು ಜ್ಯೋತಿ ಹಳೆ ವಿದ್ಯಾರ್ಥಿ ಸಂಘ ಬರೆಂಗಾಯ, ಭಾಗವಹಿಸಿದ್ದರು.

ಶಿಕ್ಷಕ ಸ್ವಾಮಿ ಎಚ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಗುರುಗಳು ಗೋಪಾಲ್ ಸ್ವಾಗತಿಸಿದರು. ಮರಿಯಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಪೋಷಕರು, ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ ಕೆ ಜಿ ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಯಿತು.

Related posts

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!