25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಆಯೋಜಿಸಲಾಗುತ್ತಿರುವ 53ನೇ ವರ್ಷದ ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 31ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯವರು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮ ಕ್ಕೆ ಬರುವಂತೆ ಆಹ್ವಾನಿಸಿದರು. ಈ ಧಾರ್ಮಿಕ ಮಹೋತ್ಸವವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಜ. 13ರಿಂದ 14 ಬುಧವಾರದವರೆಗೆ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಜರುಗಲಿದೆ.

53 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಭಜನಾ ಮಂಡಳಿ, ಗ್ರಾಮೀಣ ಭಾಗದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿಕೊಂಡಿದ್ದು, ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಭಕ್ತಾದಿಗಳಲ್ಲಿ ಅಪಾರ ಭಕ್ತಿ ಹಾಗೂ ಶ್ರದ್ದೆಗೆ ಪಾತ್ರವಾಗಿರುವುದು ಗಮನಾರ್ಹವಾಗಿದೆ. ಕಾರ್ಯಕ್ರಮದ ಅವಧಿಯಲ್ಲಿ ನಿರಂತರ ಅರ್ಧ ಏಕಾಹ ಭಜನೆ, ವಿಶೇಷ ಪೂಜೆಗಳು, ಧಾರ್ಮಿಕ ವಿಧಿವಿಧಾನಗಳು ಹಾಗೂ ಭಕ್ತಾದಿಗಳ ಸಹಭಾಗಿತ್ವದೊಂದಿಗೆ ವಿವಿಧ ಭಜನಾ ಸೇವೆಗಳು ನಡೆಯಲಿದ್ದು, ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಎಂದು ಆಯೋಜಕರು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಶೀಂಬುಲೂ, ಜಯಕಿರ್ತಿ ಜೈನ್, ಜಿತೇಂದ್ರ ಜೈನ್, ಸಂತೋಷ್ ಜೈನ್, ನಾಗೇಶ್ ಬಿ ನೆರಿಯ, ಶ್ರೀಧರ್ ರಾವ್ ಕಾಯಡ, ಟಾಕಪ್ಪ ಗೌಡ, ಸುರೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಅಕ್ಷತ್ ರೈ, ಗುರುವಪ್ಪ ನಾಯ್, ಹಾಗೂ ಭಜನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!