24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಇದರ ಆಶ್ರಯದಲ್ಲಿ ಜ್ಞಾನದೀಪ ಶಾಲಾ ಕಾಯ೯ಕ್ರಮದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ 418 ಶಾಲೆಗಳಿಗೆ 3472 ಜೊತೆ ಪೀಠೋಪಕರಣ ವಿತರಣೆ ಕಾಯ೯ಕ್ರಮ ಜ.1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಯ೯ನಿವಾ೯ಹಣಾಧಿಕಾರಿ ಅನಿಲ್ ಕುಮಾರ್, ವೀರೂ ಶೆಟ್ಟಿ, ಉದ್ಯಮಿ ಮೋಹನ್ ಕುಮಾರ್ ಉಜಿರೆ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮೀಣ ಶಾಲೆಗಳಿಗೆ ಪೀಠೋಪಕರಣಗಳ ಕೊಡುಗೆ : ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಪೀಠೋಪಕರಣಗಳ ಕೊರತೆಯಿರುವ ಸರಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚ್‌ಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಫೈಬರ್ ಮಾದರಿಯ ಡೆಸ್ಕ್ ಬೆಂಚ್‌ಗಳನ್ನು ಪೂರೈಕೆ ಮಾಡುತ್ತಿದ್ದು, ಅಧಿಕ ಬಾಳಿಕೆ ಹಾಗೂ ಕಡಿಮೆ ಭಾರವನ್ನು ಹೊಂದಿರುತ್ತದೆ. ಅನೇಕ ಗ್ರಾಮೀಣ ಶಾಲೆಗಳಲ್ಲಿ ಡೆಸ್ಕ್ ಬೆಂಚುಗಳ ಕೊರತೆಯನ್ನು ಗಮನಿಸಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಈ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಇದರಂತೆ ಶಾಲೆಗಳಿಗೆ ಗರಿಷ್ಟ 10 ಜೊತೆ ಡೆಸ್ಕ್ ಬೆಂಚುಗಳನ್ನು ಒದಗಿಸಲಾಗುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದಲೇ ಶಾಲೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಶೇ. 20ರಷ್ಟು ಮೊತ್ತವನ್ನು ಶಾಲಾಭಿವೃದ್ಧಿ ಸಮಿತಿಗಳು ಭರಿಸಿದರೆ ಉಳಿದ ಶೇ. 80 ರಷ್ಟು ಮೊತ್ತವನ್ನು ಕ್ಷೇತ್ರದಿಂದ ಭರಿಸಲಾಗುತ್ತಿದೆ. ಇದರಂತೆ ಇದುವರೆಗೆ ಒಟ್ಟು ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಲಾಗಿದೆ. ಇದಕ್ಕಾಗಿ ರೂ. 28.55 ಕೋಟಿ ಅನುದಾನ ವಿನಿಯೋಗಿಸಲಾಗಿದೆ.

ಪ್ರಸ್ತುತ ವರ್ಷ ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ ವಿವಿಧ ತಾಲೂಕುಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್ಗಳನ್ನು ವಿತರಣೆ ಮಾಡಲಾಗುತ್ತಿದೆ.
2025-26ನೇ ಸಾಲಿನಲ್ಲಿ ವಿತರಿಸಲಾಗುವ ಡೆಸ್ಕ್-ಬೆಂಚ್‌ಗಳ ವಿವರ:
ಬೆಂಗಳೂರು ಗ್ರಾಮಾಂತರ 71 ಶಾಲೆಗಳಿಗೆ 650 ಡೆಸ್ಕ್-ಬೆಂಚುಗಳು, ಚಿಕ್ಕಬಳ್ಳಾಪುರ ಶಾಲೆಗಳಿಗೆ 47 352 ಡೆಸ್ಕ್-ಬೆಂಚುಗಳು,
ತುಮಕೂರು 212 ಶಾಲೆಗಳಿಗೆ 1731 ಡೆಸ್ಕ್-ಬೆಂಚುಗಳು, ಕೋಲಾರ 88 ಶಾಲೆಗಳಿಗೆ 739 ಡೆಸ್ಕ್-ಬೆಂಚುಗಳು,

ಪ್ರಸ್ತುತ ವರ್ಷ 4 ಜಿಲ್ಲೆಯ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳನ್ನು ಪೂರೈಕೆ ಮಾಡಲಾಗುತ್ತಿದ್ದು, ಒಟ್ಟು ರೂ 2.50 ಕೋಟಿ ಮೊತ್ತ ವಿನಿಯೋಗಿಸಲಾಗುತ್ತಿದೆ. ಇದರಿಂದಾಗಿ ಸುಮಾರು 17,360 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಯೋಜನೆಯ ಕಾಯ೯ನಿವ೯ಹಕ ನಿದೇ೯ಶಕರಾದ ಅನಿಲ್ ಕುಮಾರ್ ಈ ಸಂದರ್ಭದ ತಿಳಿಸಿದರು.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!