September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

ಉಜಿರೆ: ಉಜಿರೆ ಎಸ್.ಡಿ.ಯಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆಯು ಡಿ.31ರಂದು ಎಸ್.ಡಿ.ಯಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು.

ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ ದೀಪಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ IQAC ಸಂಯೋಜಕ ಗಜಾನನ ಆರ್ ಭಟ್, ಸಾಂಸ್ಕೃತಿಕ ಸಮಿತಿ ಸಂಯೋಜಕ ಡಾ. ನಾಗಣ್ಣ, ಯಕ್ಷಗಾನ ಸಂಯೋಜಕರಾದ ಶ್ರೇಯಸ್ ಪಾಳಂದೆ, ಸಚಿನ್ ಹೆಬ್ಬಾರ್, ವಿದ್ಯಾರ್ಥಿ ಸಂಯೋಜಕರಾದ ಮನಸ್ವಿ, ಅಮೋಘ ಶಂಕರ ಉಪಸ್ಥಿತರಿದ್ದರು.
ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಸುಧನ್ವ, ಮುಮ್ಮೇಳದಲ್ಲಿ ಮನಸ್ವಿ (ಪೂತನಿ), ಅನನ್ಯ ಶೆಟ್ಟಿ (ಮಾಯಾ ಪೂತನಿ), ಮೌಲ್ಯ ಎಸ್. ಜೈನ್ (ಶ್ರೀಕೃಷ್ಣ), ಅಂಕಿತ ಬಲರಾಮ, ತೇಜಸ್ (ವಿಜಯ), ನಿರಂಜನ್ (ಶಕಟ), ವರುಣ್ (ಕಂಸ) ಪಾತ್ರ ನಿರ್ವಹಿಸುತ್ತಾರೆ.

ಡಾ. ಶ್ರುತಕೀರ್ತಿರಾಜ್ ಜೈನ್ ಅರ್ಥರಚನೆ, ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶಿಸುತ್ತಾರೆ. ಪವಿತ್ರ ಜೈನ್ ನಿರೂಪಿಸಿದರು. ಸಿಂಚನ, ಸಾಕ್ಷ, ಯಶ್ಮಿತಾ, ಶ್ವೇತ ಪ್ರಾರ್ಥಿಸಿದರು. ಸಿಂಚನ ಸ್ವಾಗತಿಸಿದರು. ಅಮೋಘ ಶಂಕರ ವಂದಿಸಿದರು.

Related posts

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!