September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

ವೇಣೂರು: ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿ ಕಾರ್ನಿವಾಲ್ ಎಂಬ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಹಾಗೂ ಸಂಚಾಲಕರಾದ ಅಶ್ವಿತ್ ಕುಲಾಲ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್ ಹಾಗೂ ಪ್ರಧಾನ ಅಧ್ಯಕ್ಷ ಹರೀಶ್ ಪೊಕ್ಕಿ ದೀಪ ಬೆಳಗಿಸಿವುದರ ಮೂಲಕ ಕಾರ್ಯಕ್ರಮವು ಆರಂಭಗೊಂಡಿತು.

ಎಲ್ .ಕೆ.ಜಿ ಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಫ್ಯಾಷನ್ ಶೋ ಸಂಗೀತ ಕುರ್ಚಿ, ಗೋಣಿಚೀಲ ಓಟ , ಒಂಟಿ ಕಾಲಿನ ಓಟ, ಕುಕ್ಕಿಂಗ್ ವಿಥೌಟ್ ಫೈರ್, ಹೂಗುಚ್ಚ ತಯಾರಿ, ವಾಲಿಬಾಲ್ ಮುಂತಾದ ಆಟಗಳನ್ನು ಆ ಡಿಸಿ ಮನೋರಂಜನೆ ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು .ಹಾಗೆಯೇ ಸಂಸ್ಥೆಯ ಅಕಾಡೆಮಿಕ್ ಅಡ್ವೈಸರ್ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್ ಎನ್ ಹಾಗೂ ಉಪನ್ಯಾಸಕರು ,ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!