July 23, 2026
ಧಾರ್ಮಿಕಬೆಳ್ತಂಗಡಿವರದಿ

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

ಉಜಿರೆ: ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿಯಿಂದ ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ ದೀಕ್ಷೆಯನ್ನು ಸ್ವೀಕರಿಸಲಿರುವ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಪೌರಸಮ್ಮಾನ ಕಾರ್ಯಕ್ರಮವು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜ.2ರಂದು ನಡೆಯಿತು.

ಶ್ರೀ ಶೀರೂರು ಮಠ ಭಾವೀ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ,ಉಜಿರೆ ಹಾಗೂ ಉಡುಪಿಗೆ ಅವಿನಾಭಾವ ಸಂಬಂಧಗಳಿವೆ. ಜನಾರ್ದನನಿಗೆ ಖುಷಿಯಾಗುವ ಕಾರ್ಯವನ್ನು ಮಧ್ವಾಚಾರ್ಯರು ಉಜಿರೆಯಲ್ಲಿ ಮಾಡಿರುತ್ತಾರೆ. ಭಕ್ತರಿಗೆ ಶ್ರೀ ಕೃಷ್ಣನ ಸೇವೆ ಮಾಡುವ ಅವಕಾಶವೇ ಪರ್ಯಾಯ. ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರವಾಗುತ್ತದೆ ಎಂದು ನುಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಪರ್ಯಾಯದ ಸಂದರ್ಭದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತಹ ಯೋಗಭಾಗ್ಯ ಬೆಳ್ತಂಗಡಿ ತಾಲೂಕಿನ ಭಕ್ತರಿಗೆ ದೊರೆತಿರುತ್ತದೆ. ಶ್ರೀ ಮಧ್ವಾಚಾರ್ಯರು ಕರ್ಮ ನಿರ್ಣಯ ಎಂಬ ಗ್ರಂಥವನ್ನು ಈ ಕ್ಷೇತ್ರದಲ್ಲಿ ಬರೆದಿರುವಂತಹದ್ದು ನಮಗೆ ಹೆಮ್ಮೆಯ ಸಂಗತಿ. ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಶ್ರೀಗಳ ಆಶೀರ್ವಾದ ಸದಾ ಇರಲಿ ಎಂದರು.

ಆರೋಗ್ಯ ಕ್ಲಿನಿಕ್ ಡಾ। ಪ್ರದೀಪ್ ನಾವೂರು ಅಭಿವಂದನಾ ನುಡಿಗಳನ್ನಾಡಿಲೌಕಿಕ ಪ್ರಾಪಂಚಿಕ ಚಿಂತನೆಗಳ ಬಗ್ಗೆ ಆಕರ್ಷಿತರಾಗುವ ಸಂದರ್ಭದಲ್ಲಿ ವಿರಕ್ತಿಯ ಭಾವ ಮೂಡುವುದು ದೊಡ್ಡ ಸಂಗತಿಯಾಗಿದ್ದು ಶ್ರೀಗಳು ವೇದಗಳನ್ನು ಉಳಿಸುವ ಸಂಕಲ್ಪ ಇಟ್ಟುಕೊಂಡಿದ್ದಾರೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶೀಕ‌‌ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ,ಎಲ್ಲರನ್ನೂ ಸ್ವಾಗತಿಸಿದರು.ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಉಡುಪಿ ಶಿರೂರು ಮಠದ ಡಾ.ಉದಯ ಕುಮಾರ್ ಸರಳತ್ತಾಯ,ಪೌರ ಸಮ್ಮಾನ ಸಮಿತಿ ಸಂಚಾಲಕ ಕೆ. ಮೋಹನ್ ಕುಮಾರ್,ಕೋಶಾಧಿಕಾರಿ ಅವಿನಾಶ್ ಶೆಟ್ಟಿ ಅಗ್ರಿಲೀಫ್ ಉಪಸ್ಥಿತರಿದ್ದರು. ಪೌರ ಸಮ್ಮಾನ್ ಸಮಿತಿ ಕಾರ್ಯದರ್ಶಿ ಪೂರನ್ ವರ್ಮ ವಂದಿಸಿದರು. ಶ್ರೀನಿವಾಸ್ ರಾವ್ ಧರ್ಮಸ್ಥಳ,ಮುರಳಿಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya
error: Content is protected !!