September 6, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

ಉಜಿರೆ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಸಭೆಯು ಉಜಿರೆಯ ಶಾರದಾ ಮಂಟಪದಲ್ಲಿ ಇಂದು ನಡೆಯಿತು.

ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ತುರ್ತು ಸ್ಪಂದನಾ ತಂಡವನ್ನು ರಚಿಸಲಾಗಿದ್ದು ಯಾವುದೇ ರೀತಿಯ ವಿಪತ್ತುಗಳು ಇದ್ದರೂಸಹಾಯಕ್ಕೆ ಧಾವಿಸುವ ಕೌಶಲ್ಯ ಯುತ ಸದಸ್ಯರನ್ನು ಈ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡ ಒಳಗೊಂಡಿದೆ.

ತುರ್ತು ಸ್ಪಂದನಾ ತಂಡದಿಂದ ವರ್ಷದಲ್ಲಿ ಎರಡು ಬಾರಿ ಸಭೆ ನಡೆಸಿ ಚಟುವಟಿಕೆಗಳ ಪರಾಮರ್ಶೆ ಮಾಡಲಾಗುತ್ತದೆ.ಕಳೆದ ಆರು ತಿಂಗಳಲ್ಲಿ ತುರ್ತು ಸ್ಪಂದನಾ ತಂಡದ ಮೂಲಕ 48 ವಿಪತ್ತು ನಿರ್ವಹಣಾ ಸೇವೆಗಳನ್ನು ಹಾಗೂ 6 ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗಿದೆ.

ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಅನಾಥ ಶವ ತೆರವು, ಮುಳುಗಿದ ವ್ಯಕ್ತಿಯ ಪ್ರಾಣ ರಕ್ಷಣೆ, ರಸ್ತೆ ಅಪಘಾತದಲ್ಲಿ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸುವುದು, ಹಾವು ಕಡಿತದಿಂದ ಅಪಾಯದಲ್ಲಿ ಇರುವ ವ್ಯಕ್ತಿ ಗೆ ಚಿಕಿತ್ಸೆ ಕೊಡಿಸಿರುವುದು ಹೀಗೆ ಅನೇಕ ಆಕಸ್ಮಿಕ ಅವಘಡ ಸಂದರ್ಭದಲ್ಲಿ ಈ ತಂಡವು ಮಾನವೀಯತೆ ಮೆರೆದಿದೆ. ಕಳೆದ ಎರಡು ವರ್ಷದಲ್ಲಿ ಈ ತಂಡವು 150 ಕ್ಕೂ ಹೆಚ್ಚು ಸೇವೆಗಳನ್ನು ಸಲ್ಲಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್ ಎಸ್ ರವರ ಪ್ರೇರಣೆ ಯಿಂದ ಈ ಘಟಕದ ಸದಸ್ಯರು ಚಟುವಟಿಕೆ ಯಲ್ಲಿ ಸಕ್ರಿಯವಾಗಿ ದ್ದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ಮಾರ್ಗದರ್ಶನ ನೀಡುತ್ತಿದ್ದಾರೆ.

ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಕಿಶೋರ್ ಕುಮಾರ್, ಮೇಲ್ವಿಚಾರಕರಾದ ರವೀಂದ್ರ, ಪೂರ್ಣಿಮಾ, ಸಂಯೋಜಕರಾದ ಪ್ರಮೀಳಾ, ಸೇವಾಪ್ರತಿನಿಧಿ ಪ್ರೇಮಲತಾ, ಸಮಿತಿಯ ಮಾಸ್ಟರ್ ಅವಿನಾಶ್ ಬಿಡೆ, ಕ್ಯಾಪ್ಟನ್ ರವೀಂದ್ರ, ಸಂಯೋಜಕರಾದ ಸುಲೈಮಾನ್ ಉಪಸ್ಥಿತರಿದ್ದರು.ತುರ್ತು ಸ್ಪಂದನಾ ತಂಡದ 21 ಸ್ವಯಂಸೇವಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya
error: Content is protected !!