25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

ಉಜಿರೆ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಸಭೆಯು ಉಜಿರೆಯ ಶಾರದಾ ಮಂಟಪದಲ್ಲಿ ಇಂದು ನಡೆಯಿತು.

ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ತುರ್ತು ಸ್ಪಂದನಾ ತಂಡವನ್ನು ರಚಿಸಲಾಗಿದ್ದು ಯಾವುದೇ ರೀತಿಯ ವಿಪತ್ತುಗಳು ಇದ್ದರೂಸಹಾಯಕ್ಕೆ ಧಾವಿಸುವ ಕೌಶಲ್ಯ ಯುತ ಸದಸ್ಯರನ್ನು ಈ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡ ಒಳಗೊಂಡಿದೆ.

ತುರ್ತು ಸ್ಪಂದನಾ ತಂಡದಿಂದ ವರ್ಷದಲ್ಲಿ ಎರಡು ಬಾರಿ ಸಭೆ ನಡೆಸಿ ಚಟುವಟಿಕೆಗಳ ಪರಾಮರ್ಶೆ ಮಾಡಲಾಗುತ್ತದೆ.ಕಳೆದ ಆರು ತಿಂಗಳಲ್ಲಿ ತುರ್ತು ಸ್ಪಂದನಾ ತಂಡದ ಮೂಲಕ 48 ವಿಪತ್ತು ನಿರ್ವಹಣಾ ಸೇವೆಗಳನ್ನು ಹಾಗೂ 6 ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗಿದೆ.

ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಅನಾಥ ಶವ ತೆರವು, ಮುಳುಗಿದ ವ್ಯಕ್ತಿಯ ಪ್ರಾಣ ರಕ್ಷಣೆ, ರಸ್ತೆ ಅಪಘಾತದಲ್ಲಿ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸುವುದು, ಹಾವು ಕಡಿತದಿಂದ ಅಪಾಯದಲ್ಲಿ ಇರುವ ವ್ಯಕ್ತಿ ಗೆ ಚಿಕಿತ್ಸೆ ಕೊಡಿಸಿರುವುದು ಹೀಗೆ ಅನೇಕ ಆಕಸ್ಮಿಕ ಅವಘಡ ಸಂದರ್ಭದಲ್ಲಿ ಈ ತಂಡವು ಮಾನವೀಯತೆ ಮೆರೆದಿದೆ. ಕಳೆದ ಎರಡು ವರ್ಷದಲ್ಲಿ ಈ ತಂಡವು 150 ಕ್ಕೂ ಹೆಚ್ಚು ಸೇವೆಗಳನ್ನು ಸಲ್ಲಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್ ಎಸ್ ರವರ ಪ್ರೇರಣೆ ಯಿಂದ ಈ ಘಟಕದ ಸದಸ್ಯರು ಚಟುವಟಿಕೆ ಯಲ್ಲಿ ಸಕ್ರಿಯವಾಗಿ ದ್ದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ಮಾರ್ಗದರ್ಶನ ನೀಡುತ್ತಿದ್ದಾರೆ.

ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಕಿಶೋರ್ ಕುಮಾರ್, ಮೇಲ್ವಿಚಾರಕರಾದ ರವೀಂದ್ರ, ಪೂರ್ಣಿಮಾ, ಸಂಯೋಜಕರಾದ ಪ್ರಮೀಳಾ, ಸೇವಾಪ್ರತಿನಿಧಿ ಪ್ರೇಮಲತಾ, ಸಮಿತಿಯ ಮಾಸ್ಟರ್ ಅವಿನಾಶ್ ಬಿಡೆ, ಕ್ಯಾಪ್ಟನ್ ರವೀಂದ್ರ, ಸಂಯೋಜಕರಾದ ಸುಲೈಮಾನ್ ಉಪಸ್ಥಿತರಿದ್ದರು.ತುರ್ತು ಸ್ಪಂದನಾ ತಂಡದ 21 ಸ್ವಯಂಸೇವಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya
error: Content is protected !!