September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಅರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಸದಾ ಜನಪರ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ಸರಕಾರಿ ಶಾಲೆಗಳ ಮೇಲೆ ವಿಶಿಷ್ಟವಾದ ಪರಿಕಲ್ಪನೆಗಳೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸದಾ ಸರಕಾರಿ ಶಾಲಾ ಮಕ್ಕಳಿಗೆ ಕೈಲಾದ ಕೊಡುಗೆಗಳನ್ನು ನೀಡುತ್ತಿರುವ ಸೇವಾ ಸಂಘಟನೆಯಾಗಿದೆ.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಶಿಕ್ಷಕ ಪೃಥ್ವಿ ರಾಜ್ ಜೈನ್, ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya
error: Content is protected !!