30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಪಟ್ಟದ ದೇವರ ಪೂಜೆ ನಡೆದ ಬಳಿಕ ಮಠದ ದಿವಾನರಾದ ಉದಯ ಕುಮಾರ್ ಭಕ್ತರಿಗೆ ಕೃಷ್ಣನ ಸಂದೇಶ ಹಾಗೂ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದವರ್ಧನ ಸ್ವಾಮೀಜಿರವರು ಭಕ್ತವೃಂದಕ್ಕೆ ಆಶೀರ್ವಚನ ನೀಡಿದರು. ಆ ಬಳಿಕ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಾಮೀಜಿಯವರಿಗೆ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ರಾಜಗೋಪಾಲ್ ಪೆರಡೇಲು, ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಇದರ ಅಧ್ಯಕ್ಷ ಮಂಜುನಾಥ್ ಗೌಡ ಕೈಕುರೆ, ಕಾರ್ಯಕ್ರಮದ ಸಂಚಾಲಕ ಜಯರಾಮ ನೆಲ್ಲಿತ್ತಾಯ, ವಿವಿಧ ದೇವಸ್ಥಾನಗಳ ಅಧ್ಯಕ್ಷರುಗಳು, ಹತ್ಯಡ್ಕ -ಶಿಶಿಲ, ಶಿಬಾಜೆ, ರೆಖ್ಯ ಗ್ರಾಮಗಳ ಭಕ್ತಾದಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!