August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ , ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01 ರಂದು ಆಚರಿಸಲಾಯಿತು.

ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ ತಂಡದವರಿಂದ ಗಾನ ಸಂಗೀತ ಕಾರ್ಯಕ್ರಮ ಸುಗಮವಾಗಿ ನೆರವೇರಿತು.
ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್ ರವರು ಹೊಸ ವರ್ಷಕ್ಕೆ ಶುಭಾಶಯಗಳನ್ನು ಹಾರೈಸಿದರು. ಸಿಯೋನ್ ಆಶ್ರಮ ನಿವಾಸಿಗಳಿಗೋಸ್ಕರ ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ ನೆರೆಕರೆಯ ಗ್ರಾಮಸ್ಥರು ಪ್ರತೀ ವರ್ಷ ಜನವರಿ ಒಂದರಂದು ಒಂದು ದಿನದ ಅನ್ನದಾನ ನೀಡುತ್ತಿದ್ದು, ಈ ಕಾರ್ಯಕ್ರಮದ ಮುಂದಾಳತ್ವವನ್ನು ಸಂಸ್ಥೆಯ ಹಿತೈಷಿಗಳಾದ ಜೋಸೆಫ್ ಪರುವಕಾರನ್ ಮತ್ತು ಡೆನ್ನಿಯವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!