22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ದ. ಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತಿ ಹೊಂದಿದ ಹಾಜಿ ಅಬೂಬಕರ್ ಅವರಿಗೆ ಕಾಜೂರು ಮತ್ತು ಕಿಲ್ಲೂರು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಮಂಡಳಿ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್ ಕಾಜೂರು, ಕೋಶಾದಿಕಾರಿ ಡಿವೈ ಉಮರ್, ಸದಸ್ಯರಾದ ಬದ್ರುದೀನ್, ಎಂಜೆಎಂ ಕಿಲ್ಲೂರು ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ ಹಾಗೂ BRR ಅಬ್ದುಲ್ ರಹಿಮಾನ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕಾಜೂರು ದರ್ಗಾ ಅಧ್ಯಕ್ಷ ಕೆ ಯು ಇಬ್ರಾಹಿಂ ಹಾಗೂ ಎಮ್.ಜೆ.ಎಮ್ ಕಿಲ್ಲೂರು ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಅವರು, ಹಾಜಿ ಅಬೂಬಕ್ಕರ್ ರವರು ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಈದೀಗ ನಿವೃತ್ತಿ ಹೊಂದುತ್ತಿದ್ದು, ಅವರ ಕಾರ್ಯವೈಖರಿಯನ್ನು ಕಾಜೂರು ಕಿಲ್ಲೂರು ಆಡಳಿತ ಮಂಡಳಿತ ಶ್ಲಾಘಿಸುತ್ತದೆ ಎಂದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!