25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞರಾಗಿ, ಖ್ಯಾತ ಉದ್ಯಮಿಯಾಗಿ, ಕ್ರೀಡಾಪ್ರೇಮಿಯಾಗಿ, ಸಮಾಜಸೇವಕರಾಗಿ, ದಕ್ಷ ಆಡಳಿತದಾರರಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ಅವರು ತಮ್ಮ ದಕ್ಷ ನಾಯಕತ್ವದಲ್ಲಿ ತಾವು ಬೆಳೆಯುವುದರೊಂದಿಗೆ ಇತರರಿಗೂ ಪ್ರೋತ್ಸಾಹ ನೀಡಿದ್ದಾರೆ. ಅನೇಕ ಸಮಾರಂಭಗಳಲ್ಲಿ ನಾವು ಜೊತೆಯಾಗಿ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕ್ಷೇತ್ರದ ಅಪಾರ  ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಸ್ನೇಹಜೀವಿಯಾಗಿ, ಆದರ್ಶ ಸಮಾಜಸೇವಕರಾಗಿ ಚಿರಪರಿಚಿತರಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. .

Related posts

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!