July 23, 2026
ಧಾರ್ಮಿಕಬೆಳ್ತಂಗಡಿವರದಿ

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

ಉಜಿರೆ: ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿಯಿಂದ ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ ದೀಕ್ಷೆಯನ್ನು ಸ್ವೀಕರಿಸಲಿರುವ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಪೌರಸಮ್ಮಾನ ಕಾರ್ಯಕ್ರಮವು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜ.2ರಂದು ನಡೆಯಿತು.

ಶ್ರೀ ಶೀರೂರು ಮಠ ಭಾವೀ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ,ಉಜಿರೆ ಹಾಗೂ ಉಡುಪಿಗೆ ಅವಿನಾಭಾವ ಸಂಬಂಧಗಳಿವೆ. ಜನಾರ್ದನನಿಗೆ ಖುಷಿಯಾಗುವ ಕಾರ್ಯವನ್ನು ಮಧ್ವಾಚಾರ್ಯರು ಉಜಿರೆಯಲ್ಲಿ ಮಾಡಿರುತ್ತಾರೆ. ಭಕ್ತರಿಗೆ ಶ್ರೀ ಕೃಷ್ಣನ ಸೇವೆ ಮಾಡುವ ಅವಕಾಶವೇ ಪರ್ಯಾಯ. ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರವಾಗುತ್ತದೆ ಎಂದು ನುಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಪರ್ಯಾಯದ ಸಂದರ್ಭದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತಹ ಯೋಗಭಾಗ್ಯ ಬೆಳ್ತಂಗಡಿ ತಾಲೂಕಿನ ಭಕ್ತರಿಗೆ ದೊರೆತಿರುತ್ತದೆ. ಶ್ರೀ ಮಧ್ವಾಚಾರ್ಯರು ಕರ್ಮ ನಿರ್ಣಯ ಎಂಬ ಗ್ರಂಥವನ್ನು ಈ ಕ್ಷೇತ್ರದಲ್ಲಿ ಬರೆದಿರುವಂತಹದ್ದು ನಮಗೆ ಹೆಮ್ಮೆಯ ಸಂಗತಿ. ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಶ್ರೀಗಳ ಆಶೀರ್ವಾದ ಸದಾ ಇರಲಿ ಎಂದರು.

ಆರೋಗ್ಯ ಕ್ಲಿನಿಕ್ ಡಾ। ಪ್ರದೀಪ್ ನಾವೂರು ಅಭಿವಂದನಾ ನುಡಿಗಳನ್ನಾಡಿಲೌಕಿಕ ಪ್ರಾಪಂಚಿಕ ಚಿಂತನೆಗಳ ಬಗ್ಗೆ ಆಕರ್ಷಿತರಾಗುವ ಸಂದರ್ಭದಲ್ಲಿ ವಿರಕ್ತಿಯ ಭಾವ ಮೂಡುವುದು ದೊಡ್ಡ ಸಂಗತಿಯಾಗಿದ್ದು ಶ್ರೀಗಳು ವೇದಗಳನ್ನು ಉಳಿಸುವ ಸಂಕಲ್ಪ ಇಟ್ಟುಕೊಂಡಿದ್ದಾರೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶೀಕ‌‌ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ,ಎಲ್ಲರನ್ನೂ ಸ್ವಾಗತಿಸಿದರು.ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಉಡುಪಿ ಶಿರೂರು ಮಠದ ಡಾ.ಉದಯ ಕುಮಾರ್ ಸರಳತ್ತಾಯ,ಪೌರ ಸಮ್ಮಾನ ಸಮಿತಿ ಸಂಚಾಲಕ ಕೆ. ಮೋಹನ್ ಕುಮಾರ್,ಕೋಶಾಧಿಕಾರಿ ಅವಿನಾಶ್ ಶೆಟ್ಟಿ ಅಗ್ರಿಲೀಫ್ ಉಪಸ್ಥಿತರಿದ್ದರು. ಪೌರ ಸಮ್ಮಾನ್ ಸಮಿತಿ ಕಾರ್ಯದರ್ಶಿ ಪೂರನ್ ವರ್ಮ ವಂದಿಸಿದರು. ಶ್ರೀನಿವಾಸ್ ರಾವ್ ಧರ್ಮಸ್ಥಳ,ಮುರಳಿಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!