ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.,ಕೋಶಾಧಿಕಾರಿ ಮಲ್ತಾಜ್ ಬೇಗಂ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಆತ್ಮ, ಚಿದಾನಂದ ಪೂಜಾರಿ, ಬದರಿನಾಥ ಸಂಪಿಗೆತ್ತಾಯ, ರತ್ನವರ್ಮ ಬುಣ್ಣು ಹಾಗೂ ಯುವ ವೇದಿಕೆ ಅಧ್ಯಕ್ಷ ಉದಯ್ ಬಿ.ಕೆ. ಉಪಸ್ಥಿತರಿದ್ದರು.











