September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಹಳೇಕೋಟೆ ಇದರ ವತಿಯಿಂದ ವಾಣಿ “ಸ್ವ ಸಹಾಯ ಸಂಘಗಳ” ಉದ್ಘಾಟನೆಯನ್ನು ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಯ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಮಲವಂತಿಗೆ ಮತ್ತು ಮಿತ್ತಬಾಗಿಲು ಗ್ರಾಮದಲ್ಲಿ ದೀಪ ಪ್ರಜ್ವಲನ ಮೂಲಕ ಸಂಘ ದ ಪುಸ್ತಕ ಬಿಡುಗಡೆ ಮೂಲಕ ಸ್ವ-ಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು.

ಗುಂಡೀರು ರವಿಚಂದ್ರ ಗೌಡ ಮತ್ತು ಆನಂದ ಗೌಡ ಮೈರ್ನೋಡಿ ಮನೆಯಲ್ಲಿ ನಡೆದ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಮಾಧವ ಗೌಡ ಬೆಳ್ತಂಗಡಿ ಭಾಗವಹಿಸಿ ಸಂಘದ ಕಾರ್ಯಕ್ರಮ ಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಲವಂತಿಗೆ-ಮಿತ್ತಬಾಗಿಲು ಗ್ರಾಮದ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರು ಹಾಗೂ ಸೋಮಂತ್ತಡ್ಕ ಶಾಖೆ ಯ ಸಲಹಾ ಸಮಿತಿಯ ನಿರ್ದೇಶಕರಾದ ಆನಂದ ಗೌಡ ಮೈರ್ನೋಡಿ, ಸಲಹಾ ಸಮಿತಿಯ ನಿರ್ದೇಶಕರಾದ ಜಯವರ್ಮ ಗೌಡ ಕಳ್ಬೇಟ್ಟು, ಬಂಗಾಡಿ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶೀನಪ್ಪ ಗೌಡ ನೇತ್ರಕೊಡಂಗೆ, ರವಿಚಂದ್ರ ಗೌಡ ಗುಂಡೀರು ಹಾಗೂ ಸ್ವ- ಸಹಾಯ ಸಂಘದ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

ಈಗಾಗಲೇ ರಚನೆಯಾದ 6 ಸಂಘಗಳ ಸದಸ್ಯರುಗಳಿಗೆ ಸ್ವ ಸಹಾಯ ಸಂಘದ ನಿಯಮಾವಳಿ ಮತ್ತು ನಿಬಂಧನೆಗಳ ಬಗ್ಗೆ ವಾಣಿ- ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ವಿವರಿಸಿ ಮಾಹಿತಿ ನೀಡಿದರು. ವಾಣಿ- ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಶಾಖಾಪ್ರಬಂಧಕರಾದ ಉಮೇಶ್. ಎಂ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya
error: Content is protected !!