September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಧರ್ಮಸ್ಥಳ: ಗಿನ್ನಿಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ 31 ನೇ ವರ್ಷದ ರಾಜ್ಯಮಟ್ಟದ ಜ್ಞಾನ ರಥ ಮತ್ತು ಜ್ಞಾನ ಪಥ (ಪುಷ್ಪ 55 ಮತ್ತು 56 ನೈತಿಕ ‘ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಜ.2 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್,ಕ್ಷೇಮನದ ನಿರ್ದೇಶಕರಾದ ಶ್ರೀಮತಿ ಶ್ರದ್ದಾ ಅಮಿತ್,ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಯು. ಜಗನ್ನಾಥ್ ಉಪಸ್ಥಿತರಿದ್ದರು .

ಜೀವನ ಮೌಲ್ಯ ಹಾಸ್ಯ ಭಾಷಣಕಾರರು ಶ್ರೀಮತಿ ಸಂಧ್ಯಾ ಶೆಣೈ ಉಡುಪಿ ಶುಭಾಶಂಸನೆಗೈದರು.

ನಂತರ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರಿಸಲಾಯಿತು. ಉಜಿರೆ ಎಸ್.ಡಿ.ಎಮ್ ಕಲಾಕೇಂದ್ರದಿಂದ ಕಥಕ್ ನೃತ್ಯ ನಡೆಯಿತು.

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿರ್ದೇಶಕ ಡಾ. ಐ ಶಶಿಕಾಂತ್ ಜೈನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪಡುಬಿದ್ರೆ ಶಿಕ್ಷಕ ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಪೂಜಾರಿ ಬಾರ್ಕೂರು ಧನ್ಯವಾದವಿತ್ತರು.

Related posts

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!