July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಪಟ್ಟದ ದೇವರ ಪೂಜೆ ನಡೆದ ಬಳಿಕ ಮಠದ ದಿವಾನರಾದ ಉದಯ ಕುಮಾರ್ ಭಕ್ತರಿಗೆ ಕೃಷ್ಣನ ಸಂದೇಶ ಹಾಗೂ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದವರ್ಧನ ಸ್ವಾಮೀಜಿರವರು ಭಕ್ತವೃಂದಕ್ಕೆ ಆಶೀರ್ವಚನ ನೀಡಿದರು. ಆ ಬಳಿಕ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಾಮೀಜಿಯವರಿಗೆ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ರಾಜಗೋಪಾಲ್ ಪೆರಡೇಲು, ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಇದರ ಅಧ್ಯಕ್ಷ ಮಂಜುನಾಥ್ ಗೌಡ ಕೈಕುರೆ, ಕಾರ್ಯಕ್ರಮದ ಸಂಚಾಲಕ ಜಯರಾಮ ನೆಲ್ಲಿತ್ತಾಯ, ವಿವಿಧ ದೇವಸ್ಥಾನಗಳ ಅಧ್ಯಕ್ಷರುಗಳು, ಹತ್ಯಡ್ಕ -ಶಿಶಿಲ, ಶಿಬಾಜೆ, ರೆಖ್ಯ ಗ್ರಾಮಗಳ ಭಕ್ತಾದಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya
error: Content is protected !!