September 6, 2026
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

ಉಜಿರೆ:ಉಡುಪಿಯಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಮೂಲತಃ ಪೂರ್ವಾಶ್ರಮದಲ್ಲಿ ನಿಡ್ಲೆ ನಿವಾಸಿಯಾದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದ ಜ.2ರಂದು ಉಜಿರೆಗೆ ಆಗಮಿಸಿದಾಗ ಅವರನ್ನು ಬೆಳಾಲು ಕ್ರಾಸ್ ಬಳಿ ಸ್ವಾಗತಿಸಲಾಯಿತು.

ಬೆಳಾಲು ಕ್ರಾಸ್ ನಿಂದ ಸ್ವಾಮೀಜಿಯವರನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದತನಕ ಮೆರವಣಿಗೆಯಲ್ಲಿ ಕರೆತರಲಾಯಿತು.ವಸಂತ ಮಂಜಿತ್ತಾಯ,ಈಶ್ವರ ಪೆರ್ಲತ್ತಾಯ,ಸುಬ್ರಹ್ಮಣ್ಯ ಕಲ್ಲೂರಾಯ ಮತ್ತು ತಂಡದವರಿಂದ ವೇದ ಘೋಷ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್,ಎಸ್ ಸಿ ಡಿ ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ,ವಿಹಿಂಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಪೂರನ್ ವರ್ಮ,ಅವಿನಾಶ್ ಅಗ್ರಿಲೀಫ್,ಉದ್ಯಮಿಗಳಾದ ಮೋಹನ್ ಕುಮಾರ್, ರಾಜೇಶ್ ಪೈ,ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್,ಉಪಾಧ್ಯಕ್ಷ ರವಿ ಬರೆಮೇಲು,ತಾಲೂಕು ಶಿವಳ್ಳಿ ಬ್ರಾಹ್ಮಣ ಸಭಾ ಅಧ್ಯಕ್ಷ ರಾಜಪ್ರಸಾದ್ ಪೋಳ್ನಾಯ,ವಾಗ್ಮಿ ಡಾ.ಪ್ರದೀಪ್ ನಾವೂರು,ಬಿಜೆಪಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ,ಪ್ರಶಾಂತ್ ಪಾರೆಂಕಿ,ಪ್ರಮುಖರಾದ ಪದ್ಮನಾಭ ಶೆಟ್ಟಿಗಾರ್ ಪದ್ಮಶ್ರೀ, ಅರವಿಂದ ಕಾರಂತ,ರವಿ ಚಕ್ಕಿತ್ತಾಯ,ರವಿಕುಮಾರ್ ಭಟ್,ವಿದ್ಯಾ ಕುಮಾರ್ ಕಾಂಚೋಡು,ರವೀಂದ್ರ ಶೆಟ್ಟಿ,ಕೆ.ವಿ.ಶ್ರೀಧರ,ಜಯಪ್ರಕಾಶ್ ಶೆಟ್ಟಿ,ಪ್ರಶಾಂತ್ ಜೈನ್,ರಾಘವೇಂದ್ರ ಬೈಪಾಡಿತ್ತಾಯ,ಹುಕಂರಾಮ್ ಪಟೇಲ್,ಲಕ್ಷ್ಮಣ ಸಫಲ್ಯ,ಪಾಂಡುರಂಗ ಬಾಳಿಗ,ಅರುಣ್ ಕುಮಾರ್ ದಿಶಾ,ಸೀತರಾಮ ಬೆಳಾಲ್,ಶಶಿಕಲಾ ಡಿ, ಹಾಗೂಮತ್ತಿತರರು ಉಪಸ್ಥಿತರಿದ್ದರು.

ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ ಸಾಗಿ ಬಂತು.ದೇವಸ್ಥಾನದ ದ್ವಾರದ ಬಳಿ ಸ್ವಾಮೀಜಿಯವರನ್ನು ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಬಳಿಕ ಅವರು ಶ್ರೀ ಜನಾರ್ದನ ದೇವರ ದರ್ಶನ ಪಡೆದರು. ನಂತರ ಸ್ವಾಮೀಜಿಯವರಿಗೆ ಪೌರ ಸನ್ಮಾನ ನಡೆಯಿತು.

Related posts

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya
error: Content is protected !!