September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ದೊರೆಯಲಿದೆ.

ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬಂಧಿತ ಸಮಸ್ಯೆಗಳ ಸೇವೆಗಳು ಲಭ್ಯವಿದೆ. ಹೆಸರು ನೋಂದಾಯಿಸಲು 7760397878 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya
error: Content is protected !!