September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞರಾಗಿ, ಖ್ಯಾತ ಉದ್ಯಮಿಯಾಗಿ, ಕ್ರೀಡಾಪ್ರೇಮಿಯಾಗಿ, ಸಮಾಜಸೇವಕರಾಗಿ, ದಕ್ಷ ಆಡಳಿತದಾರರಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ಅವರು ತಮ್ಮ ದಕ್ಷ ನಾಯಕತ್ವದಲ್ಲಿ ತಾವು ಬೆಳೆಯುವುದರೊಂದಿಗೆ ಇತರರಿಗೂ ಪ್ರೋತ್ಸಾಹ ನೀಡಿದ್ದಾರೆ. ಅನೇಕ ಸಮಾರಂಭಗಳಲ್ಲಿ ನಾವು ಜೊತೆಯಾಗಿ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕ್ಷೇತ್ರದ ಅಪಾರ  ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಸ್ನೇಹಜೀವಿಯಾಗಿ, ಆದರ್ಶ ಸಮಾಜಸೇವಕರಾಗಿ ಚಿರಪರಿಚಿತರಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. .

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!