July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞರಾಗಿ, ಖ್ಯಾತ ಉದ್ಯಮಿಯಾಗಿ, ಕ್ರೀಡಾಪ್ರೇಮಿಯಾಗಿ, ಸಮಾಜಸೇವಕರಾಗಿ, ದಕ್ಷ ಆಡಳಿತದಾರರಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ಅವರು ತಮ್ಮ ದಕ್ಷ ನಾಯಕತ್ವದಲ್ಲಿ ತಾವು ಬೆಳೆಯುವುದರೊಂದಿಗೆ ಇತರರಿಗೂ ಪ್ರೋತ್ಸಾಹ ನೀಡಿದ್ದಾರೆ. ಅನೇಕ ಸಮಾರಂಭಗಳಲ್ಲಿ ನಾವು ಜೊತೆಯಾಗಿ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕ್ಷೇತ್ರದ ಅಪಾರ  ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಸ್ನೇಹಜೀವಿಯಾಗಿ, ಆದರ್ಶ ಸಮಾಜಸೇವಕರಾಗಿ ಚಿರಪರಿಚಿತರಾಗಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. .

Related posts

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya
error: Content is protected !!