23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

ಬೆಳ್ತಂಗಡಿ : ‌ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಇಲಾಖಾ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಜನರ ಬಳಿಗೆ ತಾಲೂಕು ಆಡಳಿತ ಎಂಬ ಪರಿಕಲ್ಪನೆಯೊಂದಿಗೆ ಕಳೆದ ಮೂರು ತಿಂಗಳಿಂದ ನಿರಂತರವಾಗಿ ಜನಸ್ಪಂದನ ಸಭೆ ನಡೆದಿದ್ದು ಡಿ.31 ರಂದು ಯಶಸ್ವಿಯಾಗಿ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಗೊಂಡಿದೆ. ಜನರ ಸಮಸ್ಯೆಗಳಿಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಹರೀಶ್ ಪೂಂಜ ಹೇಳಿದರು.

ತಾಲೂಕಿನ ಯಾವುದೇ ಇಲಾಖಾ ಕಚೇರಿಯಲ್ಲಿ ಅಧಿಕಾರಿಗಳು ಚಲಾವಣದ ಪುಸ್ತಕ ಇಲ್ಲ ಜನರು ಇಲಾಖೆಗೆ ಹೋದರೆ ಅಧಿಕಾರಿಗಳು ಇರುವುದಿಲ್ಲ ಎಂದು ನಾಗರೀಕರು ಹೇಳಿದಾಗ ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ, ತಕ್ಷಣವೇ ಈ ಪದ್ಧತಿಯನ್ನು ಪಾಲಿಸಿ ಅಧಿಕಾರಿಗಳು ಚಲಾವಣವನ್ನು ದಾಖಲಿಸಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಜರಾತಿ ತಂಬ್ ನೀಡಿ ಹೊರಟು ಹೋಗುತ್ತಾರೆ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ಹೊರಟು ಹೋಗುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳಿದಾಗ ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ ಡಿಹೆಚ್ ಓ ಗಮನಕ್ಕೆ ತರಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಮುಖ್ಯಾಧಿಕಾರಿ ರಾಜೇಶ್ ಕೆ., ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುಗಳಿ ನಾರಾಯಣ ರಾವ್, ಇಲಾಖಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya
error: Content is protected !!