26.7 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕಬೆಳ್ತಂಗಡಿವರದಿ

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

ಉಜಿರೆ: ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿಯಿಂದ ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ ದೀಕ್ಷೆಯನ್ನು ಸ್ವೀಕರಿಸಲಿರುವ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಪೌರಸಮ್ಮಾನ ಕಾರ್ಯಕ್ರಮವು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜ.2ರಂದು ನಡೆಯಿತು.

ಶ್ರೀ ಶೀರೂರು ಮಠ ಭಾವೀ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ,ಉಜಿರೆ ಹಾಗೂ ಉಡುಪಿಗೆ ಅವಿನಾಭಾವ ಸಂಬಂಧಗಳಿವೆ. ಜನಾರ್ದನನಿಗೆ ಖುಷಿಯಾಗುವ ಕಾರ್ಯವನ್ನು ಮಧ್ವಾಚಾರ್ಯರು ಉಜಿರೆಯಲ್ಲಿ ಮಾಡಿರುತ್ತಾರೆ. ಭಕ್ತರಿಗೆ ಶ್ರೀ ಕೃಷ್ಣನ ಸೇವೆ ಮಾಡುವ ಅವಕಾಶವೇ ಪರ್ಯಾಯ. ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರವಾಗುತ್ತದೆ ಎಂದು ನುಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಪರ್ಯಾಯದ ಸಂದರ್ಭದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತಹ ಯೋಗಭಾಗ್ಯ ಬೆಳ್ತಂಗಡಿ ತಾಲೂಕಿನ ಭಕ್ತರಿಗೆ ದೊರೆತಿರುತ್ತದೆ. ಶ್ರೀ ಮಧ್ವಾಚಾರ್ಯರು ಕರ್ಮ ನಿರ್ಣಯ ಎಂಬ ಗ್ರಂಥವನ್ನು ಈ ಕ್ಷೇತ್ರದಲ್ಲಿ ಬರೆದಿರುವಂತಹದ್ದು ನಮಗೆ ಹೆಮ್ಮೆಯ ಸಂಗತಿ. ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಶ್ರೀಗಳ ಆಶೀರ್ವಾದ ಸದಾ ಇರಲಿ ಎಂದರು.

ಆರೋಗ್ಯ ಕ್ಲಿನಿಕ್ ಡಾ। ಪ್ರದೀಪ್ ನಾವೂರು ಅಭಿವಂದನಾ ನುಡಿಗಳನ್ನಾಡಿಲೌಕಿಕ ಪ್ರಾಪಂಚಿಕ ಚಿಂತನೆಗಳ ಬಗ್ಗೆ ಆಕರ್ಷಿತರಾಗುವ ಸಂದರ್ಭದಲ್ಲಿ ವಿರಕ್ತಿಯ ಭಾವ ಮೂಡುವುದು ದೊಡ್ಡ ಸಂಗತಿಯಾಗಿದ್ದು ಶ್ರೀಗಳು ವೇದಗಳನ್ನು ಉಳಿಸುವ ಸಂಕಲ್ಪ ಇಟ್ಟುಕೊಂಡಿದ್ದಾರೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶೀಕ‌‌ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ,ಎಲ್ಲರನ್ನೂ ಸ್ವಾಗತಿಸಿದರು.ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಉಡುಪಿ ಶಿರೂರು ಮಠದ ಡಾ.ಉದಯ ಕುಮಾರ್ ಸರಳತ್ತಾಯ,ಪೌರ ಸಮ್ಮಾನ ಸಮಿತಿ ಸಂಚಾಲಕ ಕೆ. ಮೋಹನ್ ಕುಮಾರ್,ಕೋಶಾಧಿಕಾರಿ ಅವಿನಾಶ್ ಶೆಟ್ಟಿ ಅಗ್ರಿಲೀಫ್ ಉಪಸ್ಥಿತರಿದ್ದರು. ಪೌರ ಸಮ್ಮಾನ್ ಸಮಿತಿ ಕಾರ್ಯದರ್ಶಿ ಪೂರನ್ ವರ್ಮ ವಂದಿಸಿದರು. ಶ್ರೀನಿವಾಸ್ ರಾವ್ ಧರ್ಮಸ್ಥಳ,ಮುರಳಿಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya
error: Content is protected !!