September 6, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

ಉಜಿರೆ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಸಭೆಯು ಉಜಿರೆಯ ಶಾರದಾ ಮಂಟಪದಲ್ಲಿ ಇಂದು ನಡೆಯಿತು.

ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ತುರ್ತು ಸ್ಪಂದನಾ ತಂಡವನ್ನು ರಚಿಸಲಾಗಿದ್ದು ಯಾವುದೇ ರೀತಿಯ ವಿಪತ್ತುಗಳು ಇದ್ದರೂಸಹಾಯಕ್ಕೆ ಧಾವಿಸುವ ಕೌಶಲ್ಯ ಯುತ ಸದಸ್ಯರನ್ನು ಈ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡ ಒಳಗೊಂಡಿದೆ.

ತುರ್ತು ಸ್ಪಂದನಾ ತಂಡದಿಂದ ವರ್ಷದಲ್ಲಿ ಎರಡು ಬಾರಿ ಸಭೆ ನಡೆಸಿ ಚಟುವಟಿಕೆಗಳ ಪರಾಮರ್ಶೆ ಮಾಡಲಾಗುತ್ತದೆ.ಕಳೆದ ಆರು ತಿಂಗಳಲ್ಲಿ ತುರ್ತು ಸ್ಪಂದನಾ ತಂಡದ ಮೂಲಕ 48 ವಿಪತ್ತು ನಿರ್ವಹಣಾ ಸೇವೆಗಳನ್ನು ಹಾಗೂ 6 ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗಿದೆ.

ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಅನಾಥ ಶವ ತೆರವು, ಮುಳುಗಿದ ವ್ಯಕ್ತಿಯ ಪ್ರಾಣ ರಕ್ಷಣೆ, ರಸ್ತೆ ಅಪಘಾತದಲ್ಲಿ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸುವುದು, ಹಾವು ಕಡಿತದಿಂದ ಅಪಾಯದಲ್ಲಿ ಇರುವ ವ್ಯಕ್ತಿ ಗೆ ಚಿಕಿತ್ಸೆ ಕೊಡಿಸಿರುವುದು ಹೀಗೆ ಅನೇಕ ಆಕಸ್ಮಿಕ ಅವಘಡ ಸಂದರ್ಭದಲ್ಲಿ ಈ ತಂಡವು ಮಾನವೀಯತೆ ಮೆರೆದಿದೆ. ಕಳೆದ ಎರಡು ವರ್ಷದಲ್ಲಿ ಈ ತಂಡವು 150 ಕ್ಕೂ ಹೆಚ್ಚು ಸೇವೆಗಳನ್ನು ಸಲ್ಲಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್ ಎಸ್ ರವರ ಪ್ರೇರಣೆ ಯಿಂದ ಈ ಘಟಕದ ಸದಸ್ಯರು ಚಟುವಟಿಕೆ ಯಲ್ಲಿ ಸಕ್ರಿಯವಾಗಿ ದ್ದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ಮಾರ್ಗದರ್ಶನ ನೀಡುತ್ತಿದ್ದಾರೆ.

ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಕಿಶೋರ್ ಕುಮಾರ್, ಮೇಲ್ವಿಚಾರಕರಾದ ರವೀಂದ್ರ, ಪೂರ್ಣಿಮಾ, ಸಂಯೋಜಕರಾದ ಪ್ರಮೀಳಾ, ಸೇವಾಪ್ರತಿನಿಧಿ ಪ್ರೇಮಲತಾ, ಸಮಿತಿಯ ಮಾಸ್ಟರ್ ಅವಿನಾಶ್ ಬಿಡೆ, ಕ್ಯಾಪ್ಟನ್ ರವೀಂದ್ರ, ಸಂಯೋಜಕರಾದ ಸುಲೈಮಾನ್ ಉಪಸ್ಥಿತರಿದ್ದರು.ತುರ್ತು ಸ್ಪಂದನಾ ತಂಡದ 21 ಸ್ವಯಂಸೇವಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!