September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಹಳೇಕೋಟೆ ಇದರ ವತಿಯಿಂದ ವಾಣಿ “ಸ್ವ ಸಹಾಯ ಸಂಘಗಳ” ಉದ್ಘಾಟನೆಯನ್ನು ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಯ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಮಲವಂತಿಗೆ ಮತ್ತು ಮಿತ್ತಬಾಗಿಲು ಗ್ರಾಮದಲ್ಲಿ ದೀಪ ಪ್ರಜ್ವಲನ ಮೂಲಕ ಸಂಘ ದ ಪುಸ್ತಕ ಬಿಡುಗಡೆ ಮೂಲಕ ಸ್ವ-ಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು.

ಗುಂಡೀರು ರವಿಚಂದ್ರ ಗೌಡ ಮತ್ತು ಆನಂದ ಗೌಡ ಮೈರ್ನೋಡಿ ಮನೆಯಲ್ಲಿ ನಡೆದ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಮಾಧವ ಗೌಡ ಬೆಳ್ತಂಗಡಿ ಭಾಗವಹಿಸಿ ಸಂಘದ ಕಾರ್ಯಕ್ರಮ ಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಲವಂತಿಗೆ-ಮಿತ್ತಬಾಗಿಲು ಗ್ರಾಮದ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರು ಹಾಗೂ ಸೋಮಂತ್ತಡ್ಕ ಶಾಖೆ ಯ ಸಲಹಾ ಸಮಿತಿಯ ನಿರ್ದೇಶಕರಾದ ಆನಂದ ಗೌಡ ಮೈರ್ನೋಡಿ, ಸಲಹಾ ಸಮಿತಿಯ ನಿರ್ದೇಶಕರಾದ ಜಯವರ್ಮ ಗೌಡ ಕಳ್ಬೇಟ್ಟು, ಬಂಗಾಡಿ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶೀನಪ್ಪ ಗೌಡ ನೇತ್ರಕೊಡಂಗೆ, ರವಿಚಂದ್ರ ಗೌಡ ಗುಂಡೀರು ಹಾಗೂ ಸ್ವ- ಸಹಾಯ ಸಂಘದ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

ಈಗಾಗಲೇ ರಚನೆಯಾದ 6 ಸಂಘಗಳ ಸದಸ್ಯರುಗಳಿಗೆ ಸ್ವ ಸಹಾಯ ಸಂಘದ ನಿಯಮಾವಳಿ ಮತ್ತು ನಿಬಂಧನೆಗಳ ಬಗ್ಗೆ ವಾಣಿ- ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ವಿವರಿಸಿ ಮಾಹಿತಿ ನೀಡಿದರು. ವಾಣಿ- ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಶಾಖಾಪ್ರಬಂಧಕರಾದ ಉಮೇಶ್. ಎಂ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!