September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಧರ್ಮಸ್ಥಳ: ಗಿನ್ನಿಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ 31 ನೇ ವರ್ಷದ ರಾಜ್ಯಮಟ್ಟದ ಜ್ಞಾನ ರಥ ಮತ್ತು ಜ್ಞಾನ ಪಥ (ಪುಷ್ಪ 55 ಮತ್ತು 56 ನೈತಿಕ ‘ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಜ.2 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್,ಕ್ಷೇಮನದ ನಿರ್ದೇಶಕರಾದ ಶ್ರೀಮತಿ ಶ್ರದ್ದಾ ಅಮಿತ್,ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಯು. ಜಗನ್ನಾಥ್ ಉಪಸ್ಥಿತರಿದ್ದರು .

ಜೀವನ ಮೌಲ್ಯ ಹಾಸ್ಯ ಭಾಷಣಕಾರರು ಶ್ರೀಮತಿ ಸಂಧ್ಯಾ ಶೆಣೈ ಉಡುಪಿ ಶುಭಾಶಂಸನೆಗೈದರು.

ನಂತರ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರಿಸಲಾಯಿತು. ಉಜಿರೆ ಎಸ್.ಡಿ.ಎಮ್ ಕಲಾಕೇಂದ್ರದಿಂದ ಕಥಕ್ ನೃತ್ಯ ನಡೆಯಿತು.

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿರ್ದೇಶಕ ಡಾ. ಐ ಶಶಿಕಾಂತ್ ಜೈನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪಡುಬಿದ್ರೆ ಶಿಕ್ಷಕ ರಾಘವೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಪೂಜಾರಿ ಬಾರ್ಕೂರು ಧನ್ಯವಾದವಿತ್ತರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya
error: Content is protected !!