July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಪಟ್ಟದ ದೇವರ ಪೂಜೆ ನಡೆದ ಬಳಿಕ ಮಠದ ದಿವಾನರಾದ ಉದಯ ಕುಮಾರ್ ಭಕ್ತರಿಗೆ ಕೃಷ್ಣನ ಸಂದೇಶ ಹಾಗೂ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದವರ್ಧನ ಸ್ವಾಮೀಜಿರವರು ಭಕ್ತವೃಂದಕ್ಕೆ ಆಶೀರ್ವಚನ ನೀಡಿದರು. ಆ ಬಳಿಕ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಾಮೀಜಿಯವರಿಗೆ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ರಾಜಗೋಪಾಲ್ ಪೆರಡೇಲು, ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಇದರ ಅಧ್ಯಕ್ಷ ಮಂಜುನಾಥ್ ಗೌಡ ಕೈಕುರೆ, ಕಾರ್ಯಕ್ರಮದ ಸಂಚಾಲಕ ಜಯರಾಮ ನೆಲ್ಲಿತ್ತಾಯ, ವಿವಿಧ ದೇವಸ್ಥಾನಗಳ ಅಧ್ಯಕ್ಷರುಗಳು, ಹತ್ಯಡ್ಕ -ಶಿಶಿಲ, ಶಿಬಾಜೆ, ರೆಖ್ಯ ಗ್ರಾಮಗಳ ಭಕ್ತಾದಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!