ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಬೂಡುಮುಗೇರು ದೇವಸ್ಥಾನಕ್ಕೆ ಆಗಮಿಸಿದಾಗ ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಮತ್ತು ಭಕ್ತಾದಿಗಳಿಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಪಟ್ಟದ ದೇವರ ಪೂಜೆ ನಡೆದ ಬಳಿಕ ಮಠದ ದಿವಾನರಾದ ಉದಯ ಕುಮಾರ್ ಭಕ್ತರಿಗೆ ಕೃಷ್ಣನ ಸಂದೇಶ ಹಾಗೂ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದವರ್ಧನ ಸ್ವಾಮೀಜಿರವರು ಭಕ್ತವೃಂದಕ್ಕೆ ಆಶೀರ್ವಚನ ನೀಡಿದರು. ಆ ಬಳಿಕ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಾಮೀಜಿಯವರಿಗೆ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ರಾಜಗೋಪಾಲ್ ಪೆರಡೇಲು, ಶೀರೂರು ಪರ್ಯಾಯ ಪೂಜ್ಯ ಶ್ರೀಗಳ ಸ್ವಾಗತ ಸಮಿತಿ ಹತ್ಯಡ್ಕ ಇದರ ಅಧ್ಯಕ್ಷ ಮಂಜುನಾಥ್ ಗೌಡ ಕೈಕುರೆ, ಕಾರ್ಯಕ್ರಮದ ಸಂಚಾಲಕ ಜಯರಾಮ ನೆಲ್ಲಿತ್ತಾಯ, ವಿವಿಧ ದೇವಸ್ಥಾನಗಳ ಅಧ್ಯಕ್ಷರುಗಳು, ಹತ್ಯಡ್ಕ -ಶಿಶಿಲ, ಶಿಬಾಜೆ, ರೆಖ್ಯ ಗ್ರಾಮಗಳ ಭಕ್ತಾದಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!