23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ , ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01 ರಂದು ಆಚರಿಸಲಾಯಿತು.

ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ ತಂಡದವರಿಂದ ಗಾನ ಸಂಗೀತ ಕಾರ್ಯಕ್ರಮ ಸುಗಮವಾಗಿ ನೆರವೇರಿತು.
ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್ ರವರು ಹೊಸ ವರ್ಷಕ್ಕೆ ಶುಭಾಶಯಗಳನ್ನು ಹಾರೈಸಿದರು. ಸಿಯೋನ್ ಆಶ್ರಮ ನಿವಾಸಿಗಳಿಗೋಸ್ಕರ ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ ನೆರೆಕರೆಯ ಗ್ರಾಮಸ್ಥರು ಪ್ರತೀ ವರ್ಷ ಜನವರಿ ಒಂದರಂದು ಒಂದು ದಿನದ ಅನ್ನದಾನ ನೀಡುತ್ತಿದ್ದು, ಈ ಕಾರ್ಯಕ್ರಮದ ಮುಂದಾಳತ್ವವನ್ನು ಸಂಸ್ಥೆಯ ಹಿತೈಷಿಗಳಾದ ಜೋಸೆಫ್ ಪರುವಕಾರನ್ ಮತ್ತು ಡೆನ್ನಿಯವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya
error: Content is protected !!